ಅನೇಕ ಪದವೀಧರ ನಿರುದ್ಯೋಗಿಗಳು ನರೇಗಾ ಯೋಜನೆಯಡಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಈ ಪದವೀಧರರನ್ನು ಗುರುತಿಸಿ ಸರ್ಕಾರ ಕಾಮಗಾರಿಯ ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ಪದವೀಧರರಲ್ಲಿ ಅನೇಕರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೋವಿಡ್ 19 ಕಾರಣಕ್ಕೆ ಶಾಲೆಗಳು ತೆರೆದಿಲ್ಲ. ಈ ಶಿಕ್ಷಕರ ಜೀವನ ಕಷ್ಟವಾಗಿದ್ದು, ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕ, ನೌಕರರಿಗೆ, ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ವೇತನ ನೀಡಬೇಕು ಎಂದು ಆಗ್ರಹಿಸಿದರು.