ಆದ್ದರಿಂದ ಈ ಮಾರ್ಗದಲ್ಲಿ ಬಸ್ಗಳು ಹಾಗೂ ಸಿಂಗಲ್ ಆ್ಯಕ್ಸೆಲ್ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲ್ ಗುರುವಾರ ಆದೇಶಿಸಿದ್ದಾರೆ. ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಮುಂದುವರಿಸಲಾಗಿದೆ. ಅವು, ಈ ಹಿಂದಿನ ಆದೇಶದಂತೆ ಕುಮಟಾ– ಶಿರಸಿ ಮಾರ್ಗವಾಗಿ ಸಂಚರಿಸಬೇಕು ಎಂದು ಅವರು ಸೂಚಿಸಿದ್ದಾರೆ.