ಕಾರವಾರ: ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಕ್ರಿಮ್ಸ್) ಶುಕ್ರವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಕೋವಿಡ್ ಲಸಿಕೆಯನ್ನು ಪಡೆದುಕೊಂಡರು. ಇದೇವೇಳೆ, ಲಸಿಕಾ ಕಾರ್ಯವನ್ನು ಪರಿಶೀಲಿಸಿದರು.
ಇದೇವೇಳೆ ಮಾತನಾಡಿದ ಅವರು, ‘ಲಸಿಕೆ ಬಗ್ಗೆ ಯಾವುದೇ ವದಂತಿಗಳನ್ನು ನಂಬಬಾರದು. ಲಸಿಕೆಯು ಅತ್ಯಂತ ಸುರಕ್ಷಿತವಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಎಲ್ಲ ಸಿಬ್ಬಂದಿ ಲಸಿಕೆಯನ್ನು ಸ್ವಯಂ ಪ್ರೇರಿತರಾಗಿ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಇದೇವೇಳೆ, ‘ಕ್ರಿಮ್ಸ್’ ನಿರ್ದೇಶಕ ಡಾ.ಗಜಾನನ ನಾಯಕ, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಕೂಡಾ ಲಸಿಕೆ ಹಾಕಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಕುಡ್ತಲಕರ್, ‘ಕ್ರಿಮ್ಸ್’ನ ಹಲವು ವೈದ್ಯರು ಹಾಜರಿದ್ದರು.