‘ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಿದರೆ, ಆಹಾರ ಹುಡುಕಿಕೊಂಡು ತೋಟಕ್ಕೆ ಬರುವ ಮಂಗ, ಅಳಿಲು, ಇತರ ಪ್ರಾಣಿಗಳ ಹಾವಳಿ ಕಡಿಮೆಯಾಗಬಹುದು. ಪ್ರತಿ ಎಕರೆಯಲ್ಲಿ 15 ಜಾತಿಯ 100ರಷ್ಟು ಹಣ್ಣಿನ ಗಿಡಗಳನ್ನು ಬೆಳೆಸಲಾಗುತ್ತದೆ. ಇವುಗಳಲ್ಲಿ ಮುಖ್ಯವಾಗಿ ಪೇರಲೆ, ಮುರುಗಲು, ಮಾವು, ಸೀತಾಫಲ ಒಳಗೊಂಡಿವೆ’ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ತಿಳಿಸಿದರು.