‘ಸ್ವ ಸಹಾಯ ಸಂಘದ ಸದಸ್ಯರು ಮತ್ತು ಉದ್ಯೋಗ ಖಾತ್ರಿ ಕಾರ್ಡ್ ಹೊಂದಿರುವವರನ್ನು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆಯಡಿ ತಪ್ಪದೇ ನೋಂದಣಿ ಮಾಡಿಸಬೇಕು. ಹಳೆ ಸದಸ್ಯರನ್ನು ನವೀಕರಣ ಮಾಡಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕೆಲಸ ನಿಂತು ಹೋಗಿದ್ದರೆ ಕೆಲಸವನ್ನು ಕೂಡಲೇ ಆರಂಭಿಸಬೇಕು. ಕಳೆದ ವರ್ಷ ಕೈಗೊಳ್ಳಲಾದ ಕಾಮಗಾರಿಯಲ್ಲಿ ಕೆಲವನ್ನು ಕೂಡಲೇ ಶುರು ಮಾಡಬೇಕು. ಜೊತೆಗೆ, ಕೆಲಸದ ಅಂದಾಜು ಪಟ್ಟಿ ಸಲ್ಲಿಸಬೇಕು ಎಂದು ತಿಳಿಸಿದರು.