ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ವಾದಿರಾಜ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ನ.02ರ ಬೆಳಿಗ್ಗೆ 10.30ಕ್ಕೆ ಸಮ್ಮೇಳನ ಉದ್ಘಾಟಿಸುವರು. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ. ರಮೇಶ ಪೋಕ್ರಿಯಾಲ್, ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್, ಉದ್ಯಮಿ ಡಾ.ವಿಜಯ ಸಂಕೇಶ್ವರ, ಸಂಸದ ಅನಂತಕುಮಾರ್ ಹೆಗಡೆ, ಉಜ್ಜಯಿನಿ ಪ್ರತಿಷ್ಠಾನ ಕಾರ್ಯದರ್ಶಿ ಪ್ರೊ. ವಿರೂಪಾಕ್ಷ ಜಡ್ಡೀಪಾಲ ಭಾಗವಹಿಸುವರು. ಚನ್ನೇಹಳ್ಳಿ ವೇದವಿಜ್ಞಾನ ಗುರುಕುಲ ಮುಖ್ಯಸ್ಥ ಡಾ.ರಾಮಚಂದ್ರ ಭಟ್ಟ ಕೋಟೆಮನೆ ದಿಕ್ಸೂಚಿ ಭಾಷಣ ಮಾಡುವರು. ಇದೇ ಸಂದರ್ಭದಲ್ಲಿ ವಿದ್ವಾನ್ ಶಂಕರ ಭಟ್ಟ ಜೋಶಿ ಹಾವೇರಿ ಹಾಗೂ ಆಚಾರ್ಯ ಶ್ರೀಧರ ಅಡಿ ಗೋಕರ್ಣ ಅವರನ್ನು ಗೌರವಿಸಲಾಗುತ್ತದೆ.