‘ಉತ್ತರ ಕನ್ನಡದಲ್ಲಿ ಮಲ್ಟಿಸ್ಪೆಷಾಲಿಟಿ ಸೌಲಭ್ಯಗಳಿರುವ ಒಂದೂ ಆಸ್ಪತ್ರೆಯಿಲ್ಲ. ಆರೋಗ್ಯದ ತುರ್ತು ಸಂದರ್ಭದಲ್ಲಿ ಸ್ಥಳೀಯರು ಪರಿತಪಿಸುವಂತಾಗಿದೆ. ತುರ್ತು ಚಿಕಿತ್ಸೆಗಾಗಿ ಜನ ಮಣಿಪಾಲ, ಗೋವಾ, ಹುಬ್ಬಳ್ಳಿ ಮೊದಲಾದ ಊರುಗಳಿಗೆ ಹೋಗಬೇಕಿದೆ. ಇಲ್ಲಿನ ಜನರಿಗೆ ಸ್ಥಳೀಯವಾಗಿಯೇ ಸಕಲ ವೈದ್ಯಕೀಯ ಸೌಲಭ್ಯಗಳು ಸಿಗುವಂತೆ ಅನುವು ಮಾಡಿಕೊಡಬೇಕು. ಇದರಿಂದ ಈ ಭಾಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿ ಸುಖೀ ಜೀವನ ನಡೆಸಲು ಅನುಕೂಲವಾಗುತ್ತದೆ’ ಎಂದು ಹೆಗ್ಗಡೆ ಅವರು ಪತ್ರದಲ್ಲಿ ಹೇಳಿದ್ದಾರೆ.