ಇದರ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದ ಹೊನ್ನಾವರತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ, ‘ಹಸಿರು ಸೊಪ್ಪು ಗಿಡಗಳಿಗೆ ಬಾಧಿಸುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಬೇವಿನೆಣ್ಣೆಅಥವಾ ಗೋಮೂತ್ರ ಬಳಸಬಹುದು. ಹರಿವೆ ಸೊಪ್ಪಿನಂತಹ ಗಿಡಗಳ ಇಡೀ ಭಾಗವನ್ನು ಆಹಾರವಾಗಿ ಬಳಸುವ ಕಾರಣ ಅವುಗಳಿಗೆ ಯಾವುದೇ ಕ್ರಿಮಿನಾಶಕ ರಾಸಾಯನಿಕ ಔಷಧಗಳನ್ನು ಸಿಂಪಡಿಸಬಾರದು’ ಎಂದು ತಿಳಿಸಿದರು.