‘ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ವೃದ್ಧಾಪ್ಯ ವೇತನ, ವಿಧವಾ ವೇತನ ಮುಂತಾದವುಗಳಿಗೆ ಅರ್ಜಿ ಸಲ್ಲಿಸಿ ಹಲವು ದಿನ ಕಾಯಬೇಕಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ ನಾಡ ಕಚೇರಿಗೆ, ತಾಲ್ಲೂಕು ಕಚೇರಿಗೆ ಅರ್ಜಿ ಕೊಟ್ಟವರು, ಅದು ಮಂಜೂರಾಗುವ ಮೊದಲು ಮೃತಪಟ್ಟವರಿದ್ದಾರೆ. ಇದನ್ನು ನಾನು ತಮಾಷೆಗೆ ಹೇಳಿದ್ದಲ್ಲ. ಆರು ತಿಂಗಳು, ಒಂದು ವರ್ಷ ಕಾದರೂ ಹಣ ಬರಲಿಲ್ಲ. ಸಹಜವಾಗಿ ಅವರ ಬದುಕಿನ ಕೊನೆಯಾಗಿದೆ’ ಎಂದು ವಿಷಾದ ವ್ಯಕ್ತಪಡಿಸಿದರು.