<p><strong>ಕಾರವಾರ: </strong>ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರ್ಮಾಣಗೊಳ್ಳಲಿರುವ, ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ ಸಮಿತಿ) ಸಭೆ ನಡೆಸಿದ ಅವರುಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಪ್ರಗತಿಯ ಮಾಹಿತಿ ಪಡೆದರು.</p>.<p>‘ಜಿಲ್ಲೆಯಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಗುರಿ ಹೊಂದಲಾಗಿದ್ದು, ಈವರೆಗೆ 49 ಕಿ.ಮೀ. ಪೂರ್ಣಗೊಂಡಿದೆ’ ಎಂದು ಯೋಜನೆಗೆ ಸಂಬಂಧಿಸಿದ ಅಧಿಕಾರಿ ತಿಳಿಸಿದರು.</p>.<p>ಇದಕ್ಕೆ ಅಸಮಧಾನ ವ್ಯಕ್ತಪಡಿಸಿದ ಸಂಸದ, ‘ಹಳ್ಳಿಗಳಲ್ಲಿ ರಸ್ತೆಗಳ ಸ್ಥಿತಿ ಹದಗೆಟ್ಟಿದೆ. ತ್ವರಿತವಾಗಿ ಹೊಸ ರಸ್ತೆ ನಿರ್ಮಣಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕಾರಣ ಹೇಳದೆ ಬೇಗನೆ ಕೆಲಸ ಪೂರ್ಣಗೊಳಿಸಿ’ ಎಂದರು.</p>.<p>‘ಆಯುಷ್ಮಾನ್ ಭಾರತ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದು ಈಗಾಗಲೇ 90 ಸಾವಿರ ಜನರಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. 13,955 ಜನ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರದ್ ನಾಯಕ ಮಾಹಿತಿ ನೀಡಿದರು.</p>.<p>‘ಆಯುಷ್ಮಾನ್ ಕಾರ್ಡ್ ವಿತರಣೆ ವಿಳಂಬವಾಗುತ್ತಿರುವ ದೂರುಗಳಿವೆ. ಕಾರ್ಡ್ ಸಿಗದೇ ಜನರು ತೊಂದರೆ ಅನುಭವಿಸುವ ಸಮಸ್ಯೆ ತಪ್ಪಿಸಿ. ಕಾರ್ಡ್ ವಿತರಣೆ ಚುರುಕಾಗಿಸಿ’ ಎಂದು ಸಂಸದರು ಸೂಚಿಸಿದರು.</p>.<p>ನರೇಗಾ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಗಳ ಜಾರಿಯಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದು ಅವರು ಎಚ್ಚರಿಸಿದರು.</p>.<p>‘ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಚೀಟಿ ಹೊಂದಿರುವ 17 ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಿದ್ದು, ಈಗಾಗಲೇ ಶೇ 55.91 ರಷ್ಟು ಜನರನ್ನು ತಲುಪಿದ್ದೇವೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಎಂ.ಪ್ರಿಯಾಂಗಾ ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ರೂಪಾಲಿ ನಾಯ್ಕ ಇದ್ದರು.</p>.<p><strong>ಜೇನುತುಪ್ಪಕ್ಕೆ ಮಾರುಕಟ್ಟೆ</strong><br />‘ಉತ್ತರ ಕನ್ನಡದ ಜೇನುತುಪ್ಪವನ್ನು ಬ್ರ್ಯಾಂಡ್ ಮಾಡಿ ಮಾರುಕಟ್ಟೆ ಕಲ್ಪಿಸಲು ಅಧಿಕಾರಿಗಳು ಪ್ರಯತ್ನಶೀಲರಾಗಿ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.</p>.<p>ಸರ್ಕಾರದ ಮಧುಮಿತ್ರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು ಕೇಂದ್ರ ಸರ್ಕಾರದ ನಿಯಮ್ ಯೋಜನಾ ತಂಡದ ಜೊತೆ ಮಾತನಾಡಿದರು. ಮಾರುಕಟ್ಟೆ ಕಲ್ಪಿಸಲು ಅನುಸರಿಸಬೇಕಾದ ಕಾರ್ಯಕ್ರಮಗಳ ಪಟಟಿ ಸಿದ್ಧಪಡಿಸಲು ತೋಟಗಾರಿಕಾ ಇಲಾಖೆ ಅಧಿಕಾರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರ್ಮಾಣಗೊಳ್ಳಲಿರುವ, ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಅನಂತಕುಮಾರ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ ಸಮಿತಿ) ಸಭೆ ನಡೆಸಿದ ಅವರುಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಪ್ರಗತಿಯ ಮಾಹಿತಿ ಪಡೆದರು.</p>.<p>‘ಜಿಲ್ಲೆಯಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಗುರಿ ಹೊಂದಲಾಗಿದ್ದು, ಈವರೆಗೆ 49 ಕಿ.ಮೀ. ಪೂರ್ಣಗೊಂಡಿದೆ’ ಎಂದು ಯೋಜನೆಗೆ ಸಂಬಂಧಿಸಿದ ಅಧಿಕಾರಿ ತಿಳಿಸಿದರು.</p>.<p>ಇದಕ್ಕೆ ಅಸಮಧಾನ ವ್ಯಕ್ತಪಡಿಸಿದ ಸಂಸದ, ‘ಹಳ್ಳಿಗಳಲ್ಲಿ ರಸ್ತೆಗಳ ಸ್ಥಿತಿ ಹದಗೆಟ್ಟಿದೆ. ತ್ವರಿತವಾಗಿ ಹೊಸ ರಸ್ತೆ ನಿರ್ಮಣಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಕಾರಣ ಹೇಳದೆ ಬೇಗನೆ ಕೆಲಸ ಪೂರ್ಣಗೊಳಿಸಿ’ ಎಂದರು.</p>.<p>‘ಆಯುಷ್ಮಾನ್ ಭಾರತ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದು ಈಗಾಗಲೇ 90 ಸಾವಿರ ಜನರಿಗೆ ಆರೋಗ್ಯ ಕಾರ್ಡ್ ವಿತರಿಸಲಾಗಿದೆ. 13,955 ಜನ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದಾರೆ’ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶರದ್ ನಾಯಕ ಮಾಹಿತಿ ನೀಡಿದರು.</p>.<p>‘ಆಯುಷ್ಮಾನ್ ಕಾರ್ಡ್ ವಿತರಣೆ ವಿಳಂಬವಾಗುತ್ತಿರುವ ದೂರುಗಳಿವೆ. ಕಾರ್ಡ್ ಸಿಗದೇ ಜನರು ತೊಂದರೆ ಅನುಭವಿಸುವ ಸಮಸ್ಯೆ ತಪ್ಪಿಸಿ. ಕಾರ್ಡ್ ವಿತರಣೆ ಚುರುಕಾಗಿಸಿ’ ಎಂದು ಸಂಸದರು ಸೂಚಿಸಿದರು.</p>.<p>ನರೇಗಾ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಯೋಜನೆಗಳ ಜಾರಿಯಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದು ಅವರು ಎಚ್ಚರಿಸಿದರು.</p>.<p>‘ನರೇಗಾ ಯೋಜನೆ ಅಡಿಯಲ್ಲಿ ಉದ್ಯೋಗ ಚೀಟಿ ಹೊಂದಿರುವ 17 ಲಕ್ಷ ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಿದ್ದು, ಈಗಾಗಲೇ ಶೇ 55.91 ರಷ್ಟು ಜನರನ್ನು ತಲುಪಿದ್ದೇವೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಓ ಎಂ.ಪ್ರಿಯಾಂಗಾ ಮಾಹಿತಿ ನೀಡಿದರು.</p>.<p>ಸಭೆಯಲ್ಲಿ ಶಾಸಕರಾದ ದಿನಕರ ಶೆಟ್ಟಿ, ಸುನೀಲ ನಾಯ್ಕ, ರೂಪಾಲಿ ನಾಯ್ಕ ಇದ್ದರು.</p>.<p><strong>ಜೇನುತುಪ್ಪಕ್ಕೆ ಮಾರುಕಟ್ಟೆ</strong><br />‘ಉತ್ತರ ಕನ್ನಡದ ಜೇನುತುಪ್ಪವನ್ನು ಬ್ರ್ಯಾಂಡ್ ಮಾಡಿ ಮಾರುಕಟ್ಟೆ ಕಲ್ಪಿಸಲು ಅಧಿಕಾರಿಗಳು ಪ್ರಯತ್ನಶೀಲರಾಗಿ’ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.</p>.<p>ಸರ್ಕಾರದ ಮಧುಮಿತ್ರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದ ಅವರು ಕೇಂದ್ರ ಸರ್ಕಾರದ ನಿಯಮ್ ಯೋಜನಾ ತಂಡದ ಜೊತೆ ಮಾತನಾಡಿದರು. ಮಾರುಕಟ್ಟೆ ಕಲ್ಪಿಸಲು ಅನುಸರಿಸಬೇಕಾದ ಕಾರ್ಯಕ್ರಮಗಳ ಪಟಟಿ ಸಿದ್ಧಪಡಿಸಲು ತೋಟಗಾರಿಕಾ ಇಲಾಖೆ ಅಧಿಕಾರಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>