ಗ್ರಾಮದ ಕೆಲವರು ಶುಕ್ರವಾರ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮರಳಿದ್ದರು. ಇದನ್ನು ಕಂಡ ಕೆಲವರು ಅನುಮಾನಗೊಂಡು, ಜಿಂಕೆ ಬೇಟೆ ಆಡಿದ್ದಾರೆ ಎಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಇದೇ ಮಾಹಿತಿ ಆಧರಿಸಿ, ಅರಣ್ಯ ಇಲಾಖೆಯ ಸಿಬ್ಬಂದಿ ಮನೆಯೊಂದರ ಮೇಲೆ ದಾಳಿ ಮಾಡಿದ್ದರು. ಆದರೆ, ಮನೆಯಲ್ಲಿ ಯಾವುದೇ ಬೇಟೆಯಾಡಿದ ಮಾಂಸ, ಇತರ ಸಾಮಗ್ರಿ ಪತ್ತೆಯಾಗಿಲ್ಲ. ದಾಳಿಯಿಂದ ಆಕ್ರೋಶಗೊಂಡ ಗ್ರಾಮಸ್ಥರು, ದಾಳಿಯ ನೇತೃತ್ವ ವಹಿಸಿದ್ದ ಆರ್.ಎಫ್.ಒಸುರೇಶ ಕುಲ್ಲೋಳ್ಳಿ ಸಹಿತ ಅರಣ್ಯ ಸಿಬ್ಬಂದಿಗೆ ಮನೆಯಲ್ಲಿಯೇ ದಿಗ್ಬಂಧನ ಹಾಕಿದರು.