ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಿದ, ಹಿರಿಯ ಸಿವಿಲ್ ನ್ಯಾಯಾಧೀಶೆ ಸುನೀತಾ ಅವರು, ‘ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ವಿಶೇಷ ಮಹತ್ವವಿದೆ. ಗ್ರಾಮೀಣ ಭಾಗದವರು ಉತ್ಸಾಹದಿಂದ ಮತದಾನ ಮಾಡಿದರೆ, ನಗರವಾಸಿಗಳು ಈ ಪ್ರಕ್ರಿಯೆಯಿಂದ ಹಿಂದುಳಿದಿದ್ದಾರೆ. ಸದೃಢ ಹಾಗೂ ಸಶಕ್ತ ದೇಶ ನಿರ್ಮಾಣದಲ್ಲಿ ಮತದಾನ ಪ್ರಕ್ರಿಯೆ ಉತ್ತಮವಾಗಿ ನಡೆಯಬೇಕು. ನಾಗರಿಕರು ಮತದಾನದ ಹಕ್ಕನ್ನು ಚಲಾಯಿಸಬೇಕು. ಮತದ ಹಕ್ಕನ್ನು ಯಾವುದೇ ಆಮಿಷಕ್ಕೆ ಒಳಗಾಗಿ ಮಾರಾಟ ಮಾಡಬಾರದು. ಯಾವ ಭಿಕ್ಷೆಗೂ ಮತ ಮಾರಾಟವಾಗಬಾರದು’ ಎಂದರು.