ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಮಾತನಾಡಿ, ‘ಬದುಕು, ಬದುಕಲು ಬಿಡು ಎಂಬುದು ಎಲ್ಲ ಕಾನೂನುಗಳ ಧ್ಯೇಯವಾಗಿದೆ. ಮಾನವ ಹಕ್ಕುಗಳ ರಕ್ಷಣೆ ನ್ಯಾಯಾಲಯಗಳ ಕರ್ತವ್ಯವಾಗಿದೆ. ನಿಮ್ಮ ಹಕ್ಕುಗಳ ಉಲ್ಲಂಘನೆಯಾದರೆ ಕೂಡಲೇ ಪೊಲೀಸ್ ಠಾಣೆಗೆ ಅಥವಾ ನ್ಯಾಯಾಲಯದ ಗಮನಕ್ಕೆ ತರಬೇಕು. ಇದರಿಂದ ಕಾನೂನು ಪಾಲನೆ ಸಾಧ್ಯ’ ಎಂದು ಸಲಹೆ ನೀಡಿದರು.