‘ನಿವೇಶನದ ಬೇಡಿಕೆಗಾಗಿ ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದರು. ನಿವೇಶನರಹಿತರ ಯಾದಿಯಲ್ಲಿ ಅವರ ಹೆಸರು ಇರುವುದರಿಂದ ಅವರಿಗೆ ನಿವೇಶನ ಸಿಗುವ ಸಾಧ್ಯತೆಯಿದೆ. ಇದನ್ನು ಅಲೆಮಾರಿ ಜನಾಂಗದವರಿಗೆ ಮನವರಿಕೆ ಮಾಡಿಕೊಟ್ಟ ಮೇಲೆ, ಸಾಂಪ್ರದಾಯಿಕ ವೇಷಭೂಷಣದೊಂದಿಗೆ ಮತದಾನ ಜಾಗೃತಿ ಕಾರ್ಯಕ್ರಮವನ್ನೂ ಅವರೇ ನಡೆಸಿಕೊಟ್ಟಿದ್ದಾರೆ’ ಎಂದು ಮುಂದಲಮನಿ ‘ಪ್ರಜಾವಾಣಿ’ಗೆ ತಿಳಿಸಿದರು. ಅಲೆಮಾರಿ ಜನಾಂಗದವರ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಪ್ರೊಬೆಷನದಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ಸಹ ಮೆಚ್ಚುಗೆ ಹೇಳಿದರು.