ವೇತನ ನಂಬಿ ಜೀವನ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿ ಈಗ ಮನೆ ಬಾಡಿಗೆ ಪಾವತಿ, ಇನ್ನಿತರ ದೈನಂದಿನ ಖರ್ಚಿಗೆ ಹಣವಿಲ್ಲದೆ ತೊಂದರೆಗೊಳಗಾಗಿದ್ದಾರೆ. ವೇತನ ಪಾವತಿಗೆ ನಿರ್ದೇಶನ ನೀಡುವಂತೆ ಈಚೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಮನವಿ ಸಲ್ಲಿಸಿದ್ದಾರೆ.