ನಗರದಲ್ಲಿ ಗುರುವಾರ ಸಂಜೆ ಬೀಸಿದ ಗಾಳಿಗೆ ಗ್ರೀನ್ಸ್ಟ್ರೀಟ್ನಅಂಬೇಡ್ಕರ್ ವೃತ್ತದ ಬಳಿ ಮರವೊಂದರ ಕೊಂಬೆ ಮುರಿದು ಬಿದ್ದು, ವ್ಯಕ್ತಿಯೊಬ್ಬರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ಗಮನಿಸಿದ ವಿದ್ಯಾರ್ಥಿ ಒಕ್ಕೂಟದ ಮುಖಂಡ ರಾಘು ನಾಯ್ಕ, ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದರು. ಗಾಯಗೊಂಡವರನ್ನು ಗುನಗಿವಾಡಾದ ರಾಘವೇಂದ್ರ ಎಂದು ಗುರುತಿಸಲಾಗಿದೆ.