‘ನೀರಿನ ಘಟಕವನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಲ್ಲ ಸೇರಿ ಉದ್ಘಾಟನೆ ಮಾಡಿ ಫೋಟೊ ತೆಗೆಸಿಕೊಂಡರು. ಒಂದೆರಡು ತಿಂಗಳು ಸರಿಯಿತ್ತು. ಆದರೆ, ಈಗ ಕಾರ್ಯ ನಿರ್ವಹಿಸುತ್ತಿಲ್ಲ. ಸರ್ಕಾರದ ಹಣ ವ್ಯರ್ಥವಾಗುತ್ತಿದೆ’ ಎಂದು ಸ್ಥಳೀಯರಾದ ಚಂದ್ರಹಾಸ ಪೆಡ್ನೇಕರ್ ಅಸಮಾಧಾನ ವ್ಯಕ್ತಪಡಿಸಿದರು.