<p><strong>ಕಾರವಾರ</strong>: ತಾಲ್ಲೂಕಿನ ಕದ್ರಾ ಜಲಾಶಯವು ಬುಧವಾರ ಗರಿಷ್ಠ ಮಟ್ಟ ತಲುಪಿದ್ದು, ಈ ಮಳೆಗಾಲದಲ್ಲಿ ಮೊದಲ ಬಾರಿ ಕಾಳಿ ನದಿಗೆ ನೀರು ಹರಿಸಲಾಯಿತು.</p>.<p>ಜಲಾಶಯದ ಆರು ಕ್ರೆಸ್ಟ್ಗೇಟ್ಗಳನ್ನು ತೆರೆದು 40 ಸಾವಿರ ಕ್ಯುಸೆಕ್ ನೀರನ್ನು ಹೊರ ಹಾಕಲಾಯಿತು. 34.50 ಮೀಟರ್ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈ ವರ್ಷ 32.50 ಮೀಟರ್ ನೀರು ಸಂಗ್ರಹಿಸಲು ಜಿಲ್ಲಾಡಳಿತ ಮತ್ತು ಕರ್ನಾಟಕ ವಿದ್ಯುತ್ ನಿಗಮದ ಜಂಟಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಜಲಾಶಯವು ಭರ್ತಿಯಾಗುತ್ತಿದ್ದಂತೆ ಮಧ್ಯಾಹ್ನ 3.30ರ ಸುಮಾರಿಗೆ ನದಿಗೆ ನೀರು ಹರಿಸಲಾಯಿತು.</p>.<p>ಕಾಳಿ ನದಿ ಪಾತ್ರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಮತ್ತಷ್ಟು ಹೆಚ್ಚಿನ ಒಳಹರಿವು ಬರುತ್ತಿದೆ. ಅಲ್ಲದೇ ಕದ್ರಾ ಜಲಾಶಯದ ಮೇಲ್ಭಾಗದಲ್ಲಿರುವ ಸೂಪಾ, ಕೊಡಸಳ್ಳಿ, ತಟ್ಟಿಹಳ್ಳ ಹಾಗೂ ಬೊಮ್ಮನಹಳ್ಳಿ ಜಲಾಶಯಗಳಿಗೂ ಉತ್ತಮ ಒಳಹರಿವು ಇದೆ.</p>.<p>ಸೂಪಾ ಜಲಾಶಯವು ಭರ್ತಿಯಾಗಲು ಇನ್ನೂ 28.10 ಮೀಟರ್ (ಬುಧವಾರದ ಮಾಹಿತಿಯಂತೆ) ನೀರು ಸಂಗ್ರಹವಾಗಬೇಕಿದೆ. ಅದರ ಹಿನ್ನೀರು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಬುಧವಾರ 38,940 ಕ್ಯುಸೆಕ್ ಒಳಹರಿವು ದಾಖಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ತಾಲ್ಲೂಕಿನ ಕದ್ರಾ ಜಲಾಶಯವು ಬುಧವಾರ ಗರಿಷ್ಠ ಮಟ್ಟ ತಲುಪಿದ್ದು, ಈ ಮಳೆಗಾಲದಲ್ಲಿ ಮೊದಲ ಬಾರಿ ಕಾಳಿ ನದಿಗೆ ನೀರು ಹರಿಸಲಾಯಿತು.</p>.<p>ಜಲಾಶಯದ ಆರು ಕ್ರೆಸ್ಟ್ಗೇಟ್ಗಳನ್ನು ತೆರೆದು 40 ಸಾವಿರ ಕ್ಯುಸೆಕ್ ನೀರನ್ನು ಹೊರ ಹಾಕಲಾಯಿತು. 34.50 ಮೀಟರ್ ಗರಿಷ್ಠ ಮಟ್ಟದ ಜಲಾಶಯದಲ್ಲಿ ಈ ವರ್ಷ 32.50 ಮೀಟರ್ ನೀರು ಸಂಗ್ರಹಿಸಲು ಜಿಲ್ಲಾಡಳಿತ ಮತ್ತು ಕರ್ನಾಟಕ ವಿದ್ಯುತ್ ನಿಗಮದ ಜಂಟಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಜಲಾಶಯವು ಭರ್ತಿಯಾಗುತ್ತಿದ್ದಂತೆ ಮಧ್ಯಾಹ್ನ 3.30ರ ಸುಮಾರಿಗೆ ನದಿಗೆ ನೀರು ಹರಿಸಲಾಯಿತು.</p>.<p>ಕಾಳಿ ನದಿ ಪಾತ್ರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ಜಲಾಶಯಕ್ಕೆ ಮತ್ತಷ್ಟು ಹೆಚ್ಚಿನ ಒಳಹರಿವು ಬರುತ್ತಿದೆ. ಅಲ್ಲದೇ ಕದ್ರಾ ಜಲಾಶಯದ ಮೇಲ್ಭಾಗದಲ್ಲಿರುವ ಸೂಪಾ, ಕೊಡಸಳ್ಳಿ, ತಟ್ಟಿಹಳ್ಳ ಹಾಗೂ ಬೊಮ್ಮನಹಳ್ಳಿ ಜಲಾಶಯಗಳಿಗೂ ಉತ್ತಮ ಒಳಹರಿವು ಇದೆ.</p>.<p>ಸೂಪಾ ಜಲಾಶಯವು ಭರ್ತಿಯಾಗಲು ಇನ್ನೂ 28.10 ಮೀಟರ್ (ಬುಧವಾರದ ಮಾಹಿತಿಯಂತೆ) ನೀರು ಸಂಗ್ರಹವಾಗಬೇಕಿದೆ. ಅದರ ಹಿನ್ನೀರು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಬುಧವಾರ 38,940 ಕ್ಯುಸೆಕ್ ಒಳಹರಿವು ದಾಖಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>