ತಾಲ್ಲೂಕಿನ ಗಣೇಶಗುಡಿ ಸಮೀಪ ಗುರುವಾರ ಸಂಜೆ ಕಾಳಿ ನದಿಯಲ್ಲಿ ರ್ಯಾಫ್ಟಿಂಗ್ ನಡೆಯುವಾಗ ಅಪಾಯಕ್ಕೆ ಸಿಲುಕಿದ್ದ ದೋಣಿಯಿಂದ ಮಕ್ಕಳೂ ಸೇರಿದಂತೆ 12 ಜನರನ್ನು ರಕ್ಷಿಸಲಾಗಿತ್ತು. ಈ ಸಂಬಂಧ ಶನಿವಾರ ಸಂಜೆ ಗಣೇಶಗುಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ರೆಸಾರ್ಟ್ ಮಾಲೀಕರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಜಲಕ್ರೀಡೆಗಳಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲು ಕ್ರಮ ಕೈಗೊಂಡರು.