ಕಾರವಾರ: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ರಭಸದ ಗಾಳಿ ಮುಂದುವರಿದಿದೆ. ಕಡಲಿನಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಶಿರಸಿಯಲ್ಲಿ ವರದಾ ನದಿಯ ಪ್ರವಾಹದಿಂದ 500ಕ್ಕೂ ಹೆಚ್ಚು ಎಕರೆ ಅಡಿಕೆ, ಭತ್ತದ ಕೃಷಿಭೂಮಿ ಜಲಾವೃತವಾಗಿದೆ.
ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ 58 ಸಾವಿರ ಕ್ಯುಸೆಕ್ ಒಳ ಹರಿವಿದ್ದು, ಅದೇ ಪ್ರಮಾಣದಲ್ಲಿ ಕ್ರೆಸ್ಟ್ಗೇಟ್ಗಳ ಮೂಲಕ ಕಾಳಿ ನದಿಗೆ ನೀರು ಹರಿಸಲಾಗುತ್ತಿದೆ.