<p><strong>ಕಾರವಾರ:</strong> '1,400 ಕಿರು ಜಲಾಶಯಗಳನ್ನು ಪಶ್ಚಿಮ ಘಟ್ಟದ ತಳಭಾಗದಲ್ಲಿ ನಿರ್ಮಿಸಲಾಗುವುದು. ಸ್ವಲ್ಪವೂ ಅರಣ್ಯ ಭೂಮಿಯನ್ನು ಬಳಸುವುದಿಲ್ಲ. ಸೂಕ್ಷ್ಮ ಪರಿಸರಕ್ಕೆ ಧಕ್ಕೆಯಾಗುವುದಿಲ್ಲ' ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಪಶ್ಚಿಮ ಘಟ್ಟಗಳ ಮೇಲಿನಿಂದ ಹರಿದು ಬರುವ ನದಿಗಳಲ್ಲಿ ಎರಡು, ಮೂರು ಮೀಟರ್ ಎತ್ತರದ ಕಿರು ಜಲಾಶಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿ ಜಲಾಶಯದಿಂದ 50-60 ಎಕರೆ ಜಮೀನಿಗೆ ನೀರಾವರಿ ಮಾಡಲು ಸಾಧ್ಯವಿದೆ. ಅಗತ್ಯವಿದ್ದವರು ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ' ಎಂದು ಸಮರ್ಥಿಸಿಕೊಂಡರು.</p>.<p>'ಪಶ್ಚಿಮ ಘಟ್ಟದಲ್ಲೇ ಕಾಮಗಾರಿ ಮಾಡಲಾಗುತ್ತದೆ ಎಂದು ತಪ್ಪಾಗಿ ಅರ್ಥೈಸಲಾಗಿದೆ. ಕಾಡಿನ ನಡುವೆ ಕಾಮಗಾರಿಗೆ ಕಾನೂನು ತೊಡಕುಗಳಿವೆ. ನೀರು ಹರಿಯುವ ಪ್ರದೇಶದಲ್ಲೇ ಜಲಾಶಯಗಳನ್ನು ನಿರ್ಮಿಸಲಾಗುವುದು. ಯಾವುದೇ ಪರಿಸರ ಸೂಕ್ಷ್ಮ ಅಂಶಗಳಿಗೆ ತೊಂದರೆಯಾಗುವುದಿಲ್ಲ' ಎಂದು ಪ್ರತಿಪಾದಿಸಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/detail/check-dams-in-western-ghats-problematic-for-eco-system-an-detailed-analysis-858961.html" target="_blank">ಆಳ-ಅಗಲ | ಪಶ್ಚಿಮ ಘಟ್ಟಕ್ಕೆ ಅಣೆಕಟ್ಟೆ ಏಟು?</a></p>.<p>ಕೇಂದ್ರ ಸರ್ಕಾರದ ಸಹಾಯದೊಂದಿಗೆ 3,500 ಕೋಟಿ ರೂಪಾಯಿ ವೆಚ್ಚದಲ್ಲಿ, ಪಶ್ಚಿಮ ಘಟ್ಟವಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವ ಮಾಧುಸ್ವಾಮಿ ಈ ಹಿಂದೆ ಹೇಳಿದ್ದರು. ಈ ಬಗ್ಗೆ ಪರಿಸರವಾದಿಗಳು, ತಜ್ಞರು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> '1,400 ಕಿರು ಜಲಾಶಯಗಳನ್ನು ಪಶ್ಚಿಮ ಘಟ್ಟದ ತಳಭಾಗದಲ್ಲಿ ನಿರ್ಮಿಸಲಾಗುವುದು. ಸ್ವಲ್ಪವೂ ಅರಣ್ಯ ಭೂಮಿಯನ್ನು ಬಳಸುವುದಿಲ್ಲ. ಸೂಕ್ಷ್ಮ ಪರಿಸರಕ್ಕೆ ಧಕ್ಕೆಯಾಗುವುದಿಲ್ಲ' ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಪಶ್ಚಿಮ ಘಟ್ಟಗಳ ಮೇಲಿನಿಂದ ಹರಿದು ಬರುವ ನದಿಗಳಲ್ಲಿ ಎರಡು, ಮೂರು ಮೀಟರ್ ಎತ್ತರದ ಕಿರು ಜಲಾಶಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿ ಜಲಾಶಯದಿಂದ 50-60 ಎಕರೆ ಜಮೀನಿಗೆ ನೀರಾವರಿ ಮಾಡಲು ಸಾಧ್ಯವಿದೆ. ಅಗತ್ಯವಿದ್ದವರು ಬಳಕೆ ಮಾಡಿಕೊಳ್ಳಲು ಸಾಧ್ಯವಾಗಲಿದೆ' ಎಂದು ಸಮರ್ಥಿಸಿಕೊಂಡರು.</p>.<p>'ಪಶ್ಚಿಮ ಘಟ್ಟದಲ್ಲೇ ಕಾಮಗಾರಿ ಮಾಡಲಾಗುತ್ತದೆ ಎಂದು ತಪ್ಪಾಗಿ ಅರ್ಥೈಸಲಾಗಿದೆ. ಕಾಡಿನ ನಡುವೆ ಕಾಮಗಾರಿಗೆ ಕಾನೂನು ತೊಡಕುಗಳಿವೆ. ನೀರು ಹರಿಯುವ ಪ್ರದೇಶದಲ್ಲೇ ಜಲಾಶಯಗಳನ್ನು ನಿರ್ಮಿಸಲಾಗುವುದು. ಯಾವುದೇ ಪರಿಸರ ಸೂಕ್ಷ್ಮ ಅಂಶಗಳಿಗೆ ತೊಂದರೆಯಾಗುವುದಿಲ್ಲ' ಎಂದು ಪ್ರತಿಪಾದಿಸಿದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/detail/check-dams-in-western-ghats-problematic-for-eco-system-an-detailed-analysis-858961.html" target="_blank">ಆಳ-ಅಗಲ | ಪಶ್ಚಿಮ ಘಟ್ಟಕ್ಕೆ ಅಣೆಕಟ್ಟೆ ಏಟು?</a></p>.<p>ಕೇಂದ್ರ ಸರ್ಕಾರದ ಸಹಾಯದೊಂದಿಗೆ 3,500 ಕೋಟಿ ರೂಪಾಯಿ ವೆಚ್ಚದಲ್ಲಿ, ಪಶ್ಚಿಮ ಘಟ್ಟವಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವ ಮಾಧುಸ್ವಾಮಿ ಈ ಹಿಂದೆ ಹೇಳಿದ್ದರು. ಈ ಬಗ್ಗೆ ಪರಿಸರವಾದಿಗಳು, ತಜ್ಞರು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>