ಕೇಂದ್ರ ಸರ್ಕಾರದ ಸಹಾಯದೊಂದಿಗೆ 3,500 ಕೋಟಿ ರೂಪಾಯಿ ವೆಚ್ಚದಲ್ಲಿ, ಪಶ್ಚಿಮ ಘಟ್ಟವಿರುವ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೋಜನೆ ಜಾರಿ ಮಾಡುವ ಬಗ್ಗೆ ಸಚಿವ ಮಾಧುಸ್ವಾಮಿ ಈ ಹಿಂದೆ ಹೇಳಿದ್ದರು. ಈ ಬಗ್ಗೆ ಪರಿಸರವಾದಿಗಳು, ತಜ್ಞರು ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದರು.