ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಭಾಗದಲ್ಲಿ ಕಾಡುಕೋಣ ಬೇಟೆಯಾಡಿ ಅದರ ಮಾಂಸವನ್ನು ಕಾರಿನಲ್ಲಿ ತುಂಬಿಸಿಕೊಂಡು ಭಟ್ಕಳದ ಕಡೆಗೆ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ಶಿರಾಲಿ ಚೆಕ್ ಪೋಸ್ಟ್ ಬಳಿ ಬ್ಯಾರಿಕೇಡ್ ಅಡ್ಡ ಹಾಕಿ ಕಾರನ್ನು ತಡೆಯಲು ಯತ್ನಿಸಿದರು. ಬ್ಯಾರಿಕ್ಯಾಡ್ಗೆ ಡಿಕ್ಕಿ ಹೊಡೆದು ಮುಂದೆ ಸಾಗಿದ ಕಾರು, ಜಾಲಿ ಪಟ್ಟಣದ ಬದ್ರಿಯಾ ಕಾಲೊನಿಯ ಮನೆಯೊಂದರ ಮುಂದೆ ಪತ್ತೆಯಾಗಿದೆ.