‘ನಾನು ಉಪನ್ಯಾಸಕನಾಗಿದ್ದೆ. ಹಾಗಾಗಿ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿದೆ. ಅವರೊಂದಿಗೆ ಸಂಪರ್ಕದಲ್ಲೂ ಇದ್ದೇನೆ. ಆದರೆ, ನಾನು ಶಿಕ್ಷಕರ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೇ ರಾಜ್ಯದ 36 ಇಲಾಖೆಗಳ ನೌಕರರ ಸಮಸ್ಯೆಗಳ ಬಗ್ಗೆಯೂ ವಿಧಾನಪರಿಷತ್ನಲ್ಲಿ ಮಾತನಾಡಿದ್ದೇನೆ. ಕಳೆದ ಆರು ವರ್ಷಗಳ ಅವಧಿಯಲ್ಲಿ ನಾನು ಮಾಡಿದ ಕಾರ್ಯಗಳು, ಬಿ.ಜೆ.ಪಿ ಸರ್ಕಾರದ ಸಾಧನೆಗಳನ್ನು ಪದವೀಧರರು ಪರಿಗಣಿಸಬೇಕು. ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಬೇಕು’ ಎಂದು ಮನವಿ ಮಾಡಿದರು.