ಇದೇ ವಿಷಯದಲ್ಲಿ ಜೂನ್ 10ರಂದು ರಾತ್ರಿ ಚಿಕ್ಕ ಮಾವಳ್ಳಿಯ ಶ್ವೇತಾಳ ತಂದೆ ಮನೆಯಲ್ಲಿ ಜೋರಾಗಿ ಜಗಳವಾಗಿತ್ತು. ರಾಜೇಶ, ಶ್ವೇತಾ, ಅತ್ತೆ, ಮಾವ, ಭಾವ ನಡುವೆ ಗಲಾಟೆ ತಾರಕಕ್ಕೇರಿತ್ತು. ಸಿಟ್ಟಿನ ಭರದಲ್ಲಿ ಆರೋಪಿಗಳು ಗುದ್ದಲಿ ಹಾಗೂ ಕಟ್ಟಿಗೆಯಿಂದ ಹೊಡೆದು ರಾಜೇಶನ ಕೊಲೆ ಮಾಡಿದ್ದರು. ಬಳಿಕ ಶವವನ್ನು ಸುಟ್ಟು ಹಾಕಿ ಮೂಳೆಗಳನ್ನು ಕಾಡಿನಲ್ಲಿ ಎಸೆದಿದ್ದರು.