‘ಬೆಳಗಿನ ಜಾವ 4.30ರ ಸುಮಾರಿಗೆ ತನಗೆ ಸಾರಾಯಿ ತಂದುಕೊಡುವಂತೆ ಶಾಂತಾ ಗೌಡ ಕೇಳಿ, ಆರೋಪಿಯ ಅಂಗಿ ಹಿಡಿದು ಎಳೆದರು. ಇದರಿಂದ ಸಿಟ್ಟಾದ ಆರೋಪಿಯು, ಮಹಿಳೆಯನ್ನು ಕುತ್ತಿಗೆ ಹಿಡಿದು ದೂಡಿದರು. ಆ ರಭಸಕ್ಕೆ ಆಕೆ ಮನೆಯ ಬಾಗಿಲಿನ ಮೆಟ್ಟಿಲಿನ ಮೇಲೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರವಾದ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.