ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಾಯಿಗಾಗಿ ಜಗಳ: ಮಹಿಳೆ ಸಾವು

Last Updated 7 ಏಪ್ರಿಲ್ 2022, 15:42 IST
ಅಕ್ಷರ ಗಾತ್ರ

ಕಾರವಾರ: ನಗರದ ಕಳಸವಾಡದಲ್ಲಿ ಗುರುವಾರ ಬೆಳಗಿನ ಜಾವ, ಕುಡಿಯಲು ಸಾರಾಯಿ ತಂದು ಕೊಡುವ ವಿಚಾರದಲ್ಲಿ ಶುರುವಾದ ಜಗಳವು ಮಹಿಳೆಯ ಸಾವಿಗೆ ಕಾರಣವಾಗಿದೆ.

ಶಾಂತಾ ಗೌಡ (43) ಮೃತ ಮಹಿಳೆ. ಮೂಲತಃ ಗಜೇಂದ್ರಗಡದ ಅವರು, ಕಾರವಾರದ ಕಳಸವಾಡದಲ್ಲಿ ಹನುಮಂತ ಮನವೆಲ್ ಸಿದ್ದಿ (45) ಎಂಬುವವರೊಂದಿಗೆ ವಾಸವಿದ್ದರು. ಆರೋಪಿ ಹನುಮಂತಮುಂಡಗೋಡದ ಹನುಮಾಪುರ ನಿವಾಸಿಯಾಗಿದ್ದು, ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು.

‘ಬೆಳಗಿನ ಜಾವ 4.30ರ ಸುಮಾರಿಗೆ ತನಗೆ ಸಾರಾಯಿ ತಂದುಕೊಡುವಂತೆ ಶಾಂತಾ ಗೌಡ ಕೇಳಿ, ಆರೋಪಿಯ ಅಂಗಿ ಹಿಡಿದು ಎಳೆದರು. ಇದರಿಂದ ಸಿಟ್ಟಾದ ಆರೋಪಿಯು, ಮಹಿಳೆಯನ್ನು ಕುತ್ತಿಗೆ ಹಿಡಿದು ದೂಡಿದರು. ಆ ರಭಸಕ್ಕೆ ಆಕೆ ಮನೆಯ ಬಾಗಿಲಿನ ಮೆಟ್ಟಿಲಿನ ಮೇಲೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರವಾದ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ತಪ್ಪಿಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ತನಿಖೆ ಕೈಗೊಂಡಿರುವ ಪಿ.ಎಸ್.ಐ ಸಂತೋಷಕುಮಾರ್.ಎಂ ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT