<p><strong>ಕಾರವಾರ</strong>: ನಗರದ ಕಳಸವಾಡದಲ್ಲಿ ಗುರುವಾರ ಬೆಳಗಿನ ಜಾವ, ಕುಡಿಯಲು ಸಾರಾಯಿ ತಂದು ಕೊಡುವ ವಿಚಾರದಲ್ಲಿ ಶುರುವಾದ ಜಗಳವು ಮಹಿಳೆಯ ಸಾವಿಗೆ ಕಾರಣವಾಗಿದೆ.</p>.<p>ಶಾಂತಾ ಗೌಡ (43) ಮೃತ ಮಹಿಳೆ. ಮೂಲತಃ ಗಜೇಂದ್ರಗಡದ ಅವರು, ಕಾರವಾರದ ಕಳಸವಾಡದಲ್ಲಿ ಹನುಮಂತ ಮನವೆಲ್ ಸಿದ್ದಿ (45) ಎಂಬುವವರೊಂದಿಗೆ ವಾಸವಿದ್ದರು. ಆರೋಪಿ ಹನುಮಂತಮುಂಡಗೋಡದ ಹನುಮಾಪುರ ನಿವಾಸಿಯಾಗಿದ್ದು, ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು.</p>.<p>‘ಬೆಳಗಿನ ಜಾವ 4.30ರ ಸುಮಾರಿಗೆ ತನಗೆ ಸಾರಾಯಿ ತಂದುಕೊಡುವಂತೆ ಶಾಂತಾ ಗೌಡ ಕೇಳಿ, ಆರೋಪಿಯ ಅಂಗಿ ಹಿಡಿದು ಎಳೆದರು. ಇದರಿಂದ ಸಿಟ್ಟಾದ ಆರೋಪಿಯು, ಮಹಿಳೆಯನ್ನು ಕುತ್ತಿಗೆ ಹಿಡಿದು ದೂಡಿದರು. ಆ ರಭಸಕ್ಕೆ ಆಕೆ ಮನೆಯ ಬಾಗಿಲಿನ ಮೆಟ್ಟಿಲಿನ ಮೇಲೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರವಾದ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯು ತಪ್ಪಿಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ತನಿಖೆ ಕೈಗೊಂಡಿರುವ ಪಿ.ಎಸ್.ಐ ಸಂತೋಷಕುಮಾರ್.ಎಂ ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ನಗರದ ಕಳಸವಾಡದಲ್ಲಿ ಗುರುವಾರ ಬೆಳಗಿನ ಜಾವ, ಕುಡಿಯಲು ಸಾರಾಯಿ ತಂದು ಕೊಡುವ ವಿಚಾರದಲ್ಲಿ ಶುರುವಾದ ಜಗಳವು ಮಹಿಳೆಯ ಸಾವಿಗೆ ಕಾರಣವಾಗಿದೆ.</p>.<p>ಶಾಂತಾ ಗೌಡ (43) ಮೃತ ಮಹಿಳೆ. ಮೂಲತಃ ಗಜೇಂದ್ರಗಡದ ಅವರು, ಕಾರವಾರದ ಕಳಸವಾಡದಲ್ಲಿ ಹನುಮಂತ ಮನವೆಲ್ ಸಿದ್ದಿ (45) ಎಂಬುವವರೊಂದಿಗೆ ವಾಸವಿದ್ದರು. ಆರೋಪಿ ಹನುಮಂತಮುಂಡಗೋಡದ ಹನುಮಾಪುರ ನಿವಾಸಿಯಾಗಿದ್ದು, ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದರು.</p>.<p>‘ಬೆಳಗಿನ ಜಾವ 4.30ರ ಸುಮಾರಿಗೆ ತನಗೆ ಸಾರಾಯಿ ತಂದುಕೊಡುವಂತೆ ಶಾಂತಾ ಗೌಡ ಕೇಳಿ, ಆರೋಪಿಯ ಅಂಗಿ ಹಿಡಿದು ಎಳೆದರು. ಇದರಿಂದ ಸಿಟ್ಟಾದ ಆರೋಪಿಯು, ಮಹಿಳೆಯನ್ನು ಕುತ್ತಿಗೆ ಹಿಡಿದು ದೂಡಿದರು. ಆ ರಭಸಕ್ಕೆ ಆಕೆ ಮನೆಯ ಬಾಗಿಲಿನ ಮೆಟ್ಟಿಲಿನ ಮೇಲೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರವಾದ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಯು ತಪ್ಪಿಸಿಕೊಂಡಿದ್ದು, ಹುಡುಕಾಟ ನಡೆಯುತ್ತಿದೆ ಎಂದು ತನಿಖೆ ಕೈಗೊಂಡಿರುವ ಪಿ.ಎಸ್.ಐ ಸಂತೋಷಕುಮಾರ್.ಎಂ ತಿಳಿಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>