<p><strong>ಶಿರಸಿ: </strong>‘ಗಿಡ ನೆಟ್ಟ ಮಾತ್ರಕ್ಕೆ ವನಮಹೋತ್ಸವ ಆಚರಣೆ ಆಗದು. ನೆಟ್ಟ ಗಿಡ ಬೆಳೆಸುವ ಮೂಲಕ ಆಚರಣೆಗೆ ಅರ್ಥ ನೀಡಬೇಕು’ ಎಂದು ಪರಿಸರ ತಜ್ಞ ಶಿವಾನಂದ ಕಳವೆ ಹೇಳಿದರು.</p>.<p>ತಾಲ್ಲೂಕಿನ ಕೆಂಗ್ರೆಮಠದ ಶ್ರೀ ಆಯುರ್ವೇದಿಕ್ ಫಾರ್ಮಾಸುಟಿಕಲ್ಸ್ ಆವರಣದಲ್ಲಿ ಹುಲೇಕಲ್ ಅರಣ್ಯ ವಲಯದ ಸಹಯೋಗದಲ್ಲಿ ಸೋಮವಾರ ನಡೆದ ಹಿಂದಿನ ವರ್ಷ ನೆಟ್ಟ ಗಿಡಗಳ ಅವಲೋಕನ ಮತ್ತು ವನ ಮಹೋತ್ಸವ ಮುಂದುವರಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಜನಪದ ಹಾಗೂ ಪಾರಂಪರಿಕ ವೈದ್ಯ ಸಂಘದ ಜಿಲ್ಲಾ ಘಟಕದ ಪ್ರಧಾನ ಸಂಯೋಜಕ ವಿಶ್ವನಾಥ ಹೆಗಡೆ ಕಡಬಾಳ, ‘ಕಳೆದ ವರ್ಷ ನೆಟ್ಟಿದ್ದ ಗಿಡಗಳಲ್ಲಿ ಶೇ 85ರಷ್ಟು ಗಿಡಗಳು ಬದುಕಿದ್ದು ಅವು ಉತ್ತಮ ಬೆಳವಣಿಗೆ ಕಾಣುತ್ತಿವೆ’ ಎಂದರು.</p>.<p>ಪಾರಂಪರಿಕ ವೈದ್ಯ ಶ್ರೀಧರ ಹೆಗಡೆ ನಕ್ಷೆ ಅವರನ್ನು ಸನ್ಮಾನಿಸಲಾಯಿತು.</p>.<p>ಆರ್.ಎಫ್.ಒ ಮಂಜುನಾಥ ಹೆಬ್ಬಾರ್, ಪ್ರಮುಖರಾದ ರವಿ ಹಳದೋಟ, ನರಸಿಂಹ ಹೆಗಡೆ ಬಕ್ಕಳ, ಗ್ರಾಮ ಪಂಚಾಯ್ತಿ ಸದಸ್ಯರಾದ ಜಿ.ವಿ.ಹೆಗಡೆ, ಡಾ.ಹೇಮರೆಡ್ಡಿ ಬಿ.ನೀಲಗುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>‘ಗಿಡ ನೆಟ್ಟ ಮಾತ್ರಕ್ಕೆ ವನಮಹೋತ್ಸವ ಆಚರಣೆ ಆಗದು. ನೆಟ್ಟ ಗಿಡ ಬೆಳೆಸುವ ಮೂಲಕ ಆಚರಣೆಗೆ ಅರ್ಥ ನೀಡಬೇಕು’ ಎಂದು ಪರಿಸರ ತಜ್ಞ ಶಿವಾನಂದ ಕಳವೆ ಹೇಳಿದರು.</p>.<p>ತಾಲ್ಲೂಕಿನ ಕೆಂಗ್ರೆಮಠದ ಶ್ರೀ ಆಯುರ್ವೇದಿಕ್ ಫಾರ್ಮಾಸುಟಿಕಲ್ಸ್ ಆವರಣದಲ್ಲಿ ಹುಲೇಕಲ್ ಅರಣ್ಯ ವಲಯದ ಸಹಯೋಗದಲ್ಲಿ ಸೋಮವಾರ ನಡೆದ ಹಿಂದಿನ ವರ್ಷ ನೆಟ್ಟ ಗಿಡಗಳ ಅವಲೋಕನ ಮತ್ತು ವನ ಮಹೋತ್ಸವ ಮುಂದುವರಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪ್ರಾಸ್ತಾವಿಕವಾಗಿ ಮಾತನಾಡಿದ ಜನಪದ ಹಾಗೂ ಪಾರಂಪರಿಕ ವೈದ್ಯ ಸಂಘದ ಜಿಲ್ಲಾ ಘಟಕದ ಪ್ರಧಾನ ಸಂಯೋಜಕ ವಿಶ್ವನಾಥ ಹೆಗಡೆ ಕಡಬಾಳ, ‘ಕಳೆದ ವರ್ಷ ನೆಟ್ಟಿದ್ದ ಗಿಡಗಳಲ್ಲಿ ಶೇ 85ರಷ್ಟು ಗಿಡಗಳು ಬದುಕಿದ್ದು ಅವು ಉತ್ತಮ ಬೆಳವಣಿಗೆ ಕಾಣುತ್ತಿವೆ’ ಎಂದರು.</p>.<p>ಪಾರಂಪರಿಕ ವೈದ್ಯ ಶ್ರೀಧರ ಹೆಗಡೆ ನಕ್ಷೆ ಅವರನ್ನು ಸನ್ಮಾನಿಸಲಾಯಿತು.</p>.<p>ಆರ್.ಎಫ್.ಒ ಮಂಜುನಾಥ ಹೆಬ್ಬಾರ್, ಪ್ರಮುಖರಾದ ರವಿ ಹಳದೋಟ, ನರಸಿಂಹ ಹೆಗಡೆ ಬಕ್ಕಳ, ಗ್ರಾಮ ಪಂಚಾಯ್ತಿ ಸದಸ್ಯರಾದ ಜಿ.ವಿ.ಹೆಗಡೆ, ಡಾ.ಹೇಮರೆಡ್ಡಿ ಬಿ.ನೀಲಗುಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>