ಆಳ ಸಮುದ್ರ ಮೀನುಗಾರಿಕೆಗಾಗಿ ತೆರಳಿದ್ದ ‘ಎಸ್.ಎಂ.ಪಿ.’ ಹೆಸರಿನ ದೋಣಿಯು ಮೀನುಗಾರಿಕೆ ಮುಗಿಸಿ ವಾಪಸ್ ಬರುವಾಗ ಅವಘಡ ನಡೆಯಿತು. ಹೂಳಿನಲ್ಲಿ ಸಿಲುಕಿದ ದೋಣಿಯ ರಕ್ಷಣೆಗೆ ತಮ್ಮ ದೋಣಿಯೊಂದಿಗೆ ಸ್ಥಳೀಯರು ಧಾವಿಸಿದರು. ದುರಂತಕ್ಕೀಡಾದ ದೋಣಿಯನ್ನು ಸಂಜೆಯ ವೇಳೆಗೆ ತೀರಕ್ಕೆ ಎಳೆದು ತರುವಲ್ಲಿ ಯಶಸ್ವಿಯಾದರು. ಇನ್ಸ್ಪೆಕ್ಟರ್ ಸೀತಾರಾಮ ಹಾಗೂ ಕರಾವಳಿ ಕಾವಲು ಪಡೆಯ ಇತರ ಸಿಬ್ಬಂದಿ ಕಾರ್ಯಾಚರಣೆಗೆ ನೆರವು ನೀಡಿದರು.