ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ, ವಿಕೋಪ ಮಿತಗೊಳಿಸುವಿಕೆ, ಅವುಗಳ ಸಂಬಂಧ ಪೂರ್ವ ಸಿದ್ಧತೆ ಮತ್ತು ಸ್ಪಂದನೆಯೋಜನೆಗಳ ಬಗ್ಗೆ ಮಾಹಿತಿ ವಿನಿಮಯ ನಡೆಯಲಿದೆ.ಜಿಲ್ಲಾಡಳಿತ, ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಮೈಸೂರಿನಆಡಳಿತ ತರಬೇತಿ ಸಂಸ್ಥೆಯಸಂಯುಕ್ತಾಶ್ರಯದಲ್ಲಿ ಈ ಕಾರ್ಯಾಗಾರ ಆಯೋಜಿಸಲಾಗಿದೆ.
ಮೊದಲ ದಿನದ ತರಬೇತಿಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಂಜುನಾಥ ಸಾಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅಗ್ನಿ ಶಾಮಕ ಸುರಕ್ಷತಾ ನಿರ್ವಹಣೆ, ಅಗ್ನಿ ನಂದಿಸುವ ವಿಧಗಳ ಕುರಿತು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ವಿನೋದ ಭೂತೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ಯೋಜನೆ ಮತ್ತು ಸಾಮೂಹಿಕ ಅಪಘಾತ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.