ತಜ್ಞ ವೈದ್ಯೆ ಡಾ.ತೇಜಸ್ವಿನಿ ಜಿ.ಎನ್ ಅವರು ಮಕ್ಕಳಿಗೆ ಕಾಡುವ ಕೆಮ್ಮು, ಕಫ, ಜಂತುಹುಳುವಿನ ತೊಂದರೆ ನಿವಾರಣೆಯ ಕ್ರಮಗಳನ್ನು, ಡಾ.ಮಧುಮತಿ ಹೆಗಡೆ ಅವರು ರಕ್ತಹೀನತೆಗೆ ಕಾರಣ, ಪರಿಹಾರ ಮಾರ್ಗಗಳ ಕುರಿತು ತಿಳಿಸಿದರು. ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಜಗದೀಶ ಯಾಜಿ ಅವರು, ಸಂಧಿವಾತ, ಆಮವಾತ, ವಾತರಕ್ತ, ಮೇದಸಾವೃತ ವಾತಗಳಿಗೆ ಮನೆಮದ್ದು ಸಿದ್ಧತೆ ಬಗ್ಗೆ ತಿಳಿಸಿದರು.