‘ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರಿಗೆ ಕೂಡಲೇ ತರಬೇತಿ ಆಯೋಜಿಸಬೇಕು. ಈ ತಿಂಗಳೊಳಗಾಗಿ ತರಬೇತಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು. ಜಿಲ್ಲಾ ಮಟ್ಟದ ತರಬೇತುದಾರರಾದ ಅಂಕೋಲಾ, ಜೊಯಿಡಾ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಿ.ವೈ.ಸಾವಂತ, ಆನಂದ ಬಡಕುಂದ್ರಿ, ಉದ್ಯೋಗ ಖಾತ್ರಿ ನಿರ್ದೇಶಕರಾದ ಸುನೀಲ್ ಅವರು, ಆಸ್ತಿ ತೆರಿಗೆಯನ್ನು ನಿಗದಿಗೊಳಿಸುವ ಕುರಿತು ತರಬೇತಿ ನೀಡಿದರು.