ಶಿರಸಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅನರ್ಹ ಶಾಸಕರನ್ನು ಖರೀದಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಅಗತ್ಯ ದಾಖಲೆ ಸಂಗ್ರಹಿಸಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ ಪರ ಮತಯಾಚಿಸಲು ಮುಂಡಗೋಡಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಸಿದ್ದರಾಮಯ್ಯ ಬೇಜವಾಬ್ದಾರಿಯುತ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದುಒತ್ತಾಯಿಸಿದರು.
ನ. 24ರಂದು ಬನವಾಸಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ, ಚುನಾವಣೆ ಘೋಷಣೆಯಾದ ಮೇಲೆ ಎರಡನೇ ಬಾರಿಗೆ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ ಬಂದಿದ್ದಾರೆ.
ಮುಂಡಗೋಡಿನಲ್ಲಿ ಮುಖ್ಯಮಂತ್ರಿ ಬಂದಿಳಿದ ಹೆಲಿಕಾಪ್ಟರ್ ತಪಾಸಣೆ