ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ ಅವರಿಗೆ ಮಂಗಳವಾರ ಕೋವಿಡ್ 19ದೃಢಪಟ್ಟಿದೆ.
ಆಗಸ್ಟ್ 15ರಂದು ಗಂಟಲು ದ್ರವದ ಮಾದರಿಯನ್ನು ಕಳಿಸಲಾಗಿತ್ತು ಎಂದು ತಹಶೀಲ್ದಾರ್ ಶ್ರೀಧರ ಮುಂದಲಮನಿ ತಿಳಿಸಿದ್ದಾರೆ. ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ ಸಹಿತ, ಕುಟುಂಬ ಸದಸ್ಯ ಒಬ್ಬರಿಗೆ ಸೋಂಕು ದೃಢಪಟ್ಟಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಇವರ ಪತ್ನಿಗೂ ಸಹ ಕೋವಿಡ್ ಖಚಿತಗೊಂಡಿದೆ.
ಮಂಗಳವಾರ ಮಧ್ಯಾಹ್ನ ಪಟ್ಟಣದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರ ಜೊತೆ ಪಾಲ್ಗೊಂಡಿದ್ದರು.