ಕಾರವಾರ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ನಗರದಲ್ಲಿ ಜೂನ್ 19ರಂದುಸಂಜೆ 4.30ಕ್ಕೆ ಜಾಥಾ ಹಮ್ಮಿಕೊಳ್ಳಲಾಗಿದೆ. ಮಾಲಾದೇವಿ ಮೈದಾನದಿಂದ ಸಾಗಿಸುಭಾಸ್ವೃತ್ತ, ಗ್ರೀನ್ಸ್ಟ್ರೀಟ್ ಮೂಲಕ ಮೆರವಣಿಗೆ ಆಯೋಜಿಸಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ಜಿಲ್ಲಾ ಪ್ರಭಾರಿ ಶ್ರೀನಾಥ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜೂನ್ 21ರಂದು ಬೆಳಿಗ್ಗೆ 6ಕ್ಕೆ ನಗರದ ಗುರುಮಠದ ಸಭಾಭವನದಲ್ಲಿ ಆಯೋಜಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿಏಳುಕಡೆಗಳಲ್ಲಿ ಉಚಿತವಾಗಿ ತರಬೇತಿ ನೀಡಲಾಗುತ್ತಿದೆ. ಅಂದು ಸುಮಾರು 500 ಜನರು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ’ ಎಂದು ತಿಳಿಸಿದರು.
ಪತಂಜಲಿ ಯೋಗ ಸಮಿತಿಯ ತರಬೇತುದಾರ ಪ್ರಶಾಂತ್ ರೇವಣಕರ್ ಮಾತನಾಡಿ, ‘ವಿಶ್ವವೇ ಯೋಗ ದಿನವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಭಾರತೀಯರೆಲ್ಲರೂ ಅದರೊಂದಿಗೆ ಸೇರಿಕೊಳ್ಳುವುದು ಅತ್ಯವಶ್ಯವಾಗಿದೆ. ಯೋಗದಿಂದ ದೇಹ ಮತ್ತು ಮನಸ್ಸಿನ ಆರೋಗ್ಯ ವೃದ್ಧಿಸುತ್ತದೆ’ ಎಂದು ಅಭಿಪ್ರಾಯಪಟ್ಟರು.
ಪ್ರಮುಖರಾದ ವೆಂಕಟೇಶ್, ಪೂರ್ಣಾನಂದ, ಶಾರದಾ, ರೇಷ್ಮಾ ಇದ್ದರು.