ಶಿರಸಿ: ತುಂಬಿ ಹರಿಯುತ್ತಿದ್ದ ತಾಲ್ಲೂಕಿನ ದೊಡ್ನಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚೆನ್ನಾಪುರ ಕೆರೆಯ ಸೆಳೆತಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದು, ಶುಕ್ರವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.
ಹುಸರಿ ಗ್ರಾಮದ ಗಂಗಾಧರ ತಿಮ್ಮ ಗೌಡ (28) ಮೃತ ಯುವಕ. ಬೈಕ್ ನಲ್ಲಿ ತೆರಳುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೆರೆಗೆ ಬಿದ್ದಿದ್ದ. ಸತತ ಕಾರ್ಯಾಚರಣೆ ಬಳಿಕ ಶವ ಪತ್ತೆ ಹಚ್ಚಿ ಹೊರಕ್ಕೆ ತೆಗೆಯಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.