‘ಅಲ್ಲಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ, ಗಂಟಲುದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 30ರಂದು ಅದರ ವರದಿ ಬರುವ ಮೊದಲೇ ಮೃತಪಟ್ಟಿದ್ದಾರೆ. ಅವರು ಬೇರೆ ಜಿಲ್ಲೆಯಲ್ಲಿ ಮೃತಪಟ್ಟಿರುವ ಕಾರಣ ದಾಖಲೆಯಲ್ಲಿ ‘ಇತರ’ ಎಂದು ನಮೂದಿಸಲಾಗುವುದು. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ 31 ಜನರಿಗೆ ಈಗಾಗಲೇ ಕೋವಿಡ್ ದೃಢಪಟ್ಟಿದೆ. ಸುಮಾರು 70 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮತ್ತಷ್ಟು ಜನರ ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದರು.