‘ಸೂರ್ಯ ಗರಿಷ್ಠ ಎತ್ತರಕ್ಕೆ ತಲುಪಿದಾಗ ಅದು ಶಿರೋಬಿಂದುವಿನ ಉತ್ತರಕ್ಕೆ ಅಥವಾ ದಕ್ಷಿಣಕ್ಕೆ ಇರುತ್ತದೆ. ಭೂಮಿಯ ಆವರ್ತನೆಯ ಅಕ್ಷ ಅದರ ಕಕ್ಷಾತಲಕ್ಕೆ 23.5 ಡಿಗ್ರಿ ಓರೆಯಾಗಿರುವುದೇ ಇದಕ್ಕೆ ಕಾರಣ. ಋತುಮಾನಗಳಿಗೂ ಇದೇ ಕಾರಣವಾಗಿದೆ. ಡಿ.21ರಂದು ದಕ್ಷಿಣದ ಗರಿಷ್ಠವನ್ನು ತಲುಪಿ ಉತ್ತರಕ್ಕೆ ಹೊರಳುವುದರಿಂದ ಆ ಘಟನೆಗೆ ‘ಉತ್ತರಾಯಣ’ ಎಂದು ಹೆಸರಿದೆ’ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದರು.