ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಮಗಾರಿಯ ಸ್ಥಳ ಬದಲಾವಣೆಯಾಗಿಲ್ಲ. ಆದರೆ, ಕಾಮಗಾರಿ ನಡೆಸದೆ ಬಿಲ್ ಪಾವತಿಯಾದ ಬಗ್ಗೆ ತನಿಖೆ ನಡೆಸಬೇಕಿದೆ. ಪರಿಣತರ ತಂಡವು ಇನ್ನೊಮ್ಮೆ ಈ ಸ್ಥಳಕ್ಕೆ ಭೇಟಿ ನೀಡಲಿದೆ. ಎಷ್ಟು ಕಾಮಗಾರಿಗೆ ಬಿಲ್ ಪಾವತಿಯಾಗಿದೆ ಎನ್ನುವುದರ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.