<p><strong>ಕಾರವಾರ: </strong>‘ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳನ್ನು ವಿಳಂಬ ಮಾಡದೇ ಸಕಾಲದಲ್ಲಿ ನಿರ್ವಹಿಸಬೇಕು. ಪ್ರಕೃತಿ ವಿಕೋಪದಿಂದ ರೈತರ ಬೆಳೆ ನಾಶವಾಗಿರುವ ಬಗ್ಗೆ ಯಾವುದೇ ತಾರತಮ್ಯ ಮಾಡದೇ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿಯಲ್ಲಿಮಂಗಳವಾರ ನಡೆದ ತಿಂಗಳ ಅಭಿವೃದ್ಧಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ –19 ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ರೋಗಿಗಳಿಗೆ ಸೂಕ್ತವಾದ ಆಹಾರ ಮತ್ತು ಚಿಕಿತ್ಸೆ ನೀಡಬೇಕು. ಇದರಲ್ಲಿ ಯಾವುದೇ ತಾರತಮ್ಯ ಆಗಬಾರದು. ಅಲ್ಲದೇ ಸೋಂಕಿನ ಬಗ್ಗೆ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತೋಟಗಾರಿಕೆ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿದ ಅವರು, ‘ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ವಿತರಿಸಬೇಕು’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಅಧಿಕಾರಿಯು, 23.51 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೂ ಬೆಳೆದ 541 ರೈತರಿಗೆ ₹ 5.87 ಲಕ್ಷ ಪರಿಹಾರ ಧನ ವಿತರಿಸಲಾಗಿದೆ. ಬೆಳೆ ಸಮೀಕ್ಷೆ ಹೊರತು ಪಡಿಸಿ 54.08 ಹೆಕ್ಟೇರ್ ವಿಸ್ತೀರ್ಣದ 1,297 ರೈತರಿಗೆ ₹ 13.52 ಲಕ್ಷ ಪರಿಹಾರಕ್ಕಾಗಿ ಸರ್ಕಾರಕ್ಕೆ ಅನುದಾನದ ಬೇಡಿಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಪರಿಹಾರ ಧನ ವಿತರಿಸಲು ಬೇಡಿಕೆಯಿದೆ. 689.20 ಹೆಕ್ಟೇರ್ ವಿಸ್ತೀರ್ಣದ 1,666 ರೈತರಿಗೆ ₹ 1.03 ಕೋಟಿ ಮೊತ್ತದ ಅನುದಾನ ಬೇಕಾಗುತ್ತದೆ. ಸರ್ಕಾರದ ನಿರ್ಧಾರದ ಮೇರೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿ, ಪ್ರವಾಹದಿಂದ ಹಾನಿಗೊಳಗಾದ ಶಿರಸಿ ತಾಲ್ಲೂಕಿನ ಬದನಗೋಡ ಕೆರೆಯ ಕುರಿತು ಮಳೆಯ ಪರಿಸ್ಥಿತಿ ಅವಲೋಕಿಸಿ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಯು, ‘ಪ್ರವಾಹದಿಂದ ಹಾನಿಗೊಳಗಾದ ಬದನಗೋಡ ಕೆರೆ ಪುನರುಜ್ಜೀವನ ಕಾಮಗಾರಿಗೆ ಈಗಾಗಲೇ ಗುತ್ತಿಗೆದಾರರನ್ನು ನೇಮಿಸಲಾಗಿತದೆ. ಕೆರೆ ಕಾಮಗಾರಿಯೂ ಪ್ರಗತಿಯಲ್ಲಿದೆ’ ಎಂದರು.</p>.<p class="Subhead"><strong>ವಿದ್ಯಾರ್ಥಿಗಳಿಗೆ ಅಭಿನಂದನೆ:</strong>ಕೋವಿಡ್– 19 ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿದ ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ರ್ಯಾಂಕ್ ಪಡೆದುಕೊಂಡ ವಿದ್ಯಾರ್ಥಿಗಳನ್ನು ಜಯಶ್ರೀ ಮೊಗೇರ ಅಭಿನಂದಿಸಿದರು.</p>.<p>ಆತಂಕಗಳ ನಡುವೆಯೂ ಪರೀಕ್ಷೆ ಬರೆದು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ರೇಣಕೆ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಚೈತ್ರಾ ಕೊಠಾರಕರ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>‘ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳನ್ನು ವಿಳಂಬ ಮಾಡದೇ ಸಕಾಲದಲ್ಲಿ ನಿರ್ವಹಿಸಬೇಕು. ಪ್ರಕೃತಿ ವಿಕೋಪದಿಂದ ರೈತರ ಬೆಳೆ ನಾಶವಾಗಿರುವ ಬಗ್ಗೆ ಯಾವುದೇ ತಾರತಮ್ಯ ಮಾಡದೇ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿಯಲ್ಲಿಮಂಗಳವಾರ ನಡೆದ ತಿಂಗಳ ಅಭಿವೃದ್ಧಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ –19 ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ರೋಗಿಗಳಿಗೆ ಸೂಕ್ತವಾದ ಆಹಾರ ಮತ್ತು ಚಿಕಿತ್ಸೆ ನೀಡಬೇಕು. ಇದರಲ್ಲಿ ಯಾವುದೇ ತಾರತಮ್ಯ ಆಗಬಾರದು. ಅಲ್ಲದೇ ಸೋಂಕಿನ ಬಗ್ಗೆ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತೋಟಗಾರಿಕೆ ಇಲಾಖೆಯ ಪ್ರಗತಿಯನ್ನು ಪರಿಶೀಲಿಸಿದ ಅವರು, ‘ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಗಳಿಗೆ ಮೊದಲ ಆದ್ಯತೆ ನೀಡಿ ಪರಿಹಾರ ವಿತರಿಸಬೇಕು’ ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ತೋಟಗಾರಿಕೆ ಇಲಾಖೆ ಅಧಿಕಾರಿಯು, 23.51 ಹೆಕ್ಟೇರ್ ವಿಸ್ತೀರ್ಣದಲ್ಲಿ ಹೂ ಬೆಳೆದ 541 ರೈತರಿಗೆ ₹ 5.87 ಲಕ್ಷ ಪರಿಹಾರ ಧನ ವಿತರಿಸಲಾಗಿದೆ. ಬೆಳೆ ಸಮೀಕ್ಷೆ ಹೊರತು ಪಡಿಸಿ 54.08 ಹೆಕ್ಟೇರ್ ವಿಸ್ತೀರ್ಣದ 1,297 ರೈತರಿಗೆ ₹ 13.52 ಲಕ್ಷ ಪರಿಹಾರಕ್ಕಾಗಿ ಸರ್ಕಾರಕ್ಕೆ ಅನುದಾನದ ಬೇಡಿಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಪರಿಹಾರ ಧನ ವಿತರಿಸಲು ಬೇಡಿಕೆಯಿದೆ. 689.20 ಹೆಕ್ಟೇರ್ ವಿಸ್ತೀರ್ಣದ 1,666 ರೈತರಿಗೆ ₹ 1.03 ಕೋಟಿ ಮೊತ್ತದ ಅನುದಾನ ಬೇಕಾಗುತ್ತದೆ. ಸರ್ಕಾರದ ನಿರ್ಧಾರದ ಮೇರೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿ, ಪ್ರವಾಹದಿಂದ ಹಾನಿಗೊಳಗಾದ ಶಿರಸಿ ತಾಲ್ಲೂಕಿನ ಬದನಗೋಡ ಕೆರೆಯ ಕುರಿತು ಮಳೆಯ ಪರಿಸ್ಥಿತಿ ಅವಲೋಕಿಸಿ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಯು, ‘ಪ್ರವಾಹದಿಂದ ಹಾನಿಗೊಳಗಾದ ಬದನಗೋಡ ಕೆರೆ ಪುನರುಜ್ಜೀವನ ಕಾಮಗಾರಿಗೆ ಈಗಾಗಲೇ ಗುತ್ತಿಗೆದಾರರನ್ನು ನೇಮಿಸಲಾಗಿತದೆ. ಕೆರೆ ಕಾಮಗಾರಿಯೂ ಪ್ರಗತಿಯಲ್ಲಿದೆ’ ಎಂದರು.</p>.<p class="Subhead"><strong>ವಿದ್ಯಾರ್ಥಿಗಳಿಗೆ ಅಭಿನಂದನೆ:</strong>ಕೋವಿಡ್– 19 ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಿದ ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ರ್ಯಾಂಕ್ ಪಡೆದುಕೊಂಡ ವಿದ್ಯಾರ್ಥಿಗಳನ್ನು ಜಯಶ್ರೀ ಮೊಗೇರ ಅಭಿನಂದಿಸಿದರು.</p>.<p>ಆತಂಕಗಳ ನಡುವೆಯೂ ಪರೀಕ್ಷೆ ಬರೆದು ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ರೇಣಕೆ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಚೈತ್ರಾ ಕೊಠಾರಕರ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>