ಕಿರೀಟ ಪರಿಶೀಲನೆ: ಮಂಡ್ಯದ ಜಿಲ್ಲಾ ಖಜಾನೆಯಿಂದ ಪೊಲೀಸ್ ಬಂದೋಬಸ್ತ್ನಲ್ಲಿ ಮೇಲುಕೋಟೆಗೆ ಕೃಷ್ಣರಾಜಮುಡಿ ತಿರುವಾಭರಣ ಪೆಟ್ಟಿಗೆ ತರಲಾಯಿತು. ಪಟ್ಟಣದ ಹೊರವಲಯದಲ್ಲಿರುವ ಆಂಜನೇಯಸ್ವಾಮಿ ಸನ್ನಿಧಿಯಲ್ಲಿರಿಸಿ ಪೂಜೆ ನೆರವೇರಿಸಿ ಭದ್ರತಾ ಸಿಬ್ಬಂದಿ ಗೌರವ ಸಮರ್ಪಿಸಿದರು. ನಂತರ ಪಲ್ಲಕ್ಕಿಯಲ್ಲಿರಿಸಿ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ತರಲಾಯಿತು.