<p><strong>ಯಲ್ಲಾಪುರ</strong>: ತಾಲ್ಲೂಕಿನ ಗಡಿ ಭಾಗವಾದ ಡೋಂಗ್ರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋನಾಳದಲ್ಲಿ ಉರಗ ತಜ್ಞ ಸೂರಜ್ ಶೆಟ್ಟಿ ಅರಬೈಲ್ ಶನಿವಾರ ಸಂಜೆ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದರು.</p>.<p>ಕೋನಾಳದ ಪ್ರಶಾಂತ ಭಟ್ಟ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತು. ಸುಮಾರು 10 ಅಡಿಯಷ್ಟು ಉದ್ದವಿತ್ತು. ಕಾಳಿಂಗ ಸರ್ಪ ಕಂಡ ತಕ್ಷಣ ಮನೆಯವರು ಹೌಹಾರಿ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ರಾಮನಗುಳಿಯ ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಅಂಕಲಿ, ಹಜರತ್ ಅಲಿ ಕುಂದಗೋಳ, ಬಸವರಾಜ ಜಂಬಗಿ, ಪ್ರಭುದೇವ ಅವರು ಉರಗ ತಜ್ಞ ಸೂರಜ್ ಅವರಿಗೆ ಹಾವು ಹಿಡಿಯಲು ಸಹಕರಿಸಿದರು.</p>.<p>ಸಿಟ್ಟಿನಲ್ಲಿ ಕೆರಳಿದ್ದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲು ಸತತ ಎರಡು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು. ಉರಗಪ್ರೇಮಿ ಸೂರಜ್ ಚಾಕಚಕ್ಯತೆಯಿಂದ ಕಾಳಿಂಗ ಸರ್ಪವನ್ನು ಯಶಸ್ವಿಯಾಗಿ ಸೆರೆಹಿಡಿದರು. ನಂತರ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಅರಣ್ಯಕ್ಕೆ ಬಿಡಲಾಯಿತು.</p>.<p>ಸಮೀಪದ ಕನಕಹಳ್ಳಿಯಲ್ಲಿ ನಾಲ್ಕು ದಿನಗಳ ಹಿಂದೆ 14 ಅಡಿ ಉದ್ದದ ಕಾಳಿಂಗ ಸರ್ಪವನ್ನೂ ಸೆರೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಗಡಿ ಭಾಗವಾದ ಡೋಂಗ್ರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋನಾಳದಲ್ಲಿ ಉರಗ ತಜ್ಞ ಸೂರಜ್ ಶೆಟ್ಟಿ ಅರಬೈಲ್ ಶನಿವಾರ ಸಂಜೆ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸೆರೆ ಹಿಡಿದರು.</p>.<p>ಕೋನಾಳದ ಪ್ರಶಾಂತ ಭಟ್ಟ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತು. ಸುಮಾರು 10 ಅಡಿಯಷ್ಟು ಉದ್ದವಿತ್ತು. ಕಾಳಿಂಗ ಸರ್ಪ ಕಂಡ ತಕ್ಷಣ ಮನೆಯವರು ಹೌಹಾರಿ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದರು.</p>.<p>ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ರಾಮನಗುಳಿಯ ಉಪವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಅಂಕಲಿ, ಹಜರತ್ ಅಲಿ ಕುಂದಗೋಳ, ಬಸವರಾಜ ಜಂಬಗಿ, ಪ್ರಭುದೇವ ಅವರು ಉರಗ ತಜ್ಞ ಸೂರಜ್ ಅವರಿಗೆ ಹಾವು ಹಿಡಿಯಲು ಸಹಕರಿಸಿದರು.</p>.<p>ಸಿಟ್ಟಿನಲ್ಲಿ ಕೆರಳಿದ್ದ ಕಾಳಿಂಗ ಸರ್ಪವನ್ನು ಸೆರೆಹಿಡಿಯಲು ಸತತ ಎರಡು ಗಂಟೆಗಳ ಕಾಲ ಹರಸಾಹಸ ಪಡಬೇಕಾಯಿತು. ಉರಗಪ್ರೇಮಿ ಸೂರಜ್ ಚಾಕಚಕ್ಯತೆಯಿಂದ ಕಾಳಿಂಗ ಸರ್ಪವನ್ನು ಯಶಸ್ವಿಯಾಗಿ ಸೆರೆಹಿಡಿದರು. ನಂತರ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಅರಣ್ಯಕ್ಕೆ ಬಿಡಲಾಯಿತು.</p>.<p>ಸಮೀಪದ ಕನಕಹಳ್ಳಿಯಲ್ಲಿ ನಾಲ್ಕು ದಿನಗಳ ಹಿಂದೆ 14 ಅಡಿ ಉದ್ದದ ಕಾಳಿಂಗ ಸರ್ಪವನ್ನೂ ಸೆರೆಹಿಡಿಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>