<p><strong>ಶಿರಸಿ:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷ ಆಡಳಿತದಲ್ಲಿ ಶಿರಸಿ, ಸಿದ್ದಾಪುರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ ₹382 ಕೋಟಿಯಷ್ಟು ಅನುದಾನ ತರಲಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ನಗರದ ಶಾಸಕರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸಲಾಗುತ್ತಿದೆ. ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸದನವನ್ನು ಉಪಯೋಗಿಸಿಕೊಂಡಿದ್ದೇನೆ’ ಎಂದರು.</p>.<p>‘ಅರಣ್ಯಭೂಮಿ ಅತಿಕ್ರಮಣ ಸಮಸ್ಯೆ ಜೀವಂತವಾಗಿದ್ದು, ಇದರ ನಿವಾರಣೆ ಸಂಬಂಧ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೆ. ಕಸ್ತೂರಿರಂಗನ್ ವರದಿ ಜಾರಿಯಿಂದ ಕ್ಷೇತ್ರದ ಹಲವು ಗ್ರಾಮಗಳು ಸಮಸ್ಯೆಗೆ ಒಳಗಾಗುತ್ತಿದ್ದವು. ಹೀಗಾಗಿ ಆ ಬಗ್ಗೆ ಸದನದಲ್ಲಿ ಚರ್ಚಿಸಿ, ವಿರೋಧ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗಿದೆ. ನಗರದಲ್ಲಿ ಫಾರ್ಮ್ ನಂಬರ್ 3 ಸಮಸ್ಯೆ ಹಲವು ವರ್ಷಗಳಿಂದ ಇದ್ದು, ಪ್ರಸ್ತುತ ಬಿ ಖಾತಾ ವ್ಯವಸ್ಥೆ ಜಾರಿ ಮೂಲಕ ಪರಿಹಾರ ಕಂಡುಕೊಳ್ಳಲಾಗಿದೆ. ಅಡಿಕೆ ಬೆಳೆಗಾರರ ಹಿತಕ್ಕಾಗಿ ಎಲೆಚುಕ್ಕೆ ರೋಗ ಸಂಶೋಧನೆಗೆ ಅನುದಾನ ಬಿಡುಗಡೆ ಮಾಡಿಸಲಾಗಿದೆ’ ಎಂದರು.</p>.<p>‘ಎರಡು ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿಗಳಿಗೆ ₹55 ಕೋಟಿ, ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹20 ಕೋಟಿ, ನಗರಸಭೆ ಕುಡಿಯುವ ನೀರಿನ ಕಾಮಗಾರಿಗೆ ₹65 ಕೋಟಿ, ಸಿದ್ದಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಯೋಜನೆಗೆ ₹30 ಕೋಟಿ, ಸಿದ್ದಾಪುರ ಪಟ್ಟಣ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ₹58 ಕೋಟಿ, ಕಾನಸೂರು ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ₹26 ಕೋಟಿ, ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ₹22 ಕೋಟಿ ಸೇರಿ ಹಲವು ಕಾಮಗಾರಿಗಳಿಗಾಗಿ ₹382 ಕೋಟಿ ಅನುದಾನ ಮಂಜೂರು ಮಾಡಿ, ಕಾಮಗಾರಿಗಳಿಗೆ ಗುತ್ತಿಗೆ ಕರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಹಂತ ಹಂತವಾಗಿ ಇನ್ನಷ್ಟು ರಸ್ತೆಗಳ ಮೇಲ್ದರ್ಜೆ ಕಾರ್ಯ ಮಾಡಲಾಗುವುದು. ಜನಪರವಾಗಿ ಆಡಳಿತ ನೀಡಿ, ಮೂಲಸೌಕರ್ಯ ಹೆಚ್ಚಿಸಲು ಕ್ರಮವಹಿಸಲಾಗುವುದು’ ಎಂದರು.</p>.<p>ಪಕ್ಷದ ಪದಾಧಿಕಾರಿಗಳಾದ ಜಗದೀಶ ಗೌಡ, ಎಸ್.ಕೆ. ಭಾಗವತ, ದೀಪಕ ದೊಡ್ಡೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ‘ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷ ಆಡಳಿತದಲ್ಲಿ ಶಿರಸಿ, ಸಿದ್ದಾಪುರ ವಿಧಾನಸಭಾ ಕ್ಷೇತ್ರಕ್ಕೆ ವಿವಿಧ ಯೋಜನೆಯಡಿ ₹382 ಕೋಟಿಯಷ್ಟು ಅನುದಾನ ತರಲಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ನಗರದ ಶಾಸಕರ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯನ್ನು ಹಂತಹಂತವಾಗಿ ಈಡೇರಿಸಲಾಗುತ್ತಿದೆ. ಎರಡು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಸದನವನ್ನು ಉಪಯೋಗಿಸಿಕೊಂಡಿದ್ದೇನೆ’ ಎಂದರು.</p>.<p>‘ಅರಣ್ಯಭೂಮಿ ಅತಿಕ್ರಮಣ ಸಮಸ್ಯೆ ಜೀವಂತವಾಗಿದ್ದು, ಇದರ ನಿವಾರಣೆ ಸಂಬಂಧ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೆ. ಕಸ್ತೂರಿರಂಗನ್ ವರದಿ ಜಾರಿಯಿಂದ ಕ್ಷೇತ್ರದ ಹಲವು ಗ್ರಾಮಗಳು ಸಮಸ್ಯೆಗೆ ಒಳಗಾಗುತ್ತಿದ್ದವು. ಹೀಗಾಗಿ ಆ ಬಗ್ಗೆ ಸದನದಲ್ಲಿ ಚರ್ಚಿಸಿ, ವಿರೋಧ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗಿದೆ. ನಗರದಲ್ಲಿ ಫಾರ್ಮ್ ನಂಬರ್ 3 ಸಮಸ್ಯೆ ಹಲವು ವರ್ಷಗಳಿಂದ ಇದ್ದು, ಪ್ರಸ್ತುತ ಬಿ ಖಾತಾ ವ್ಯವಸ್ಥೆ ಜಾರಿ ಮೂಲಕ ಪರಿಹಾರ ಕಂಡುಕೊಳ್ಳಲಾಗಿದೆ. ಅಡಿಕೆ ಬೆಳೆಗಾರರ ಹಿತಕ್ಕಾಗಿ ಎಲೆಚುಕ್ಕೆ ರೋಗ ಸಂಶೋಧನೆಗೆ ಅನುದಾನ ಬಿಡುಗಡೆ ಮಾಡಿಸಲಾಗಿದೆ’ ಎಂದರು.</p>.<p>‘ಎರಡು ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿಗಳಿಗೆ ₹55 ಕೋಟಿ, ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹25 ಕೋಟಿ, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ₹20 ಕೋಟಿ, ನಗರಸಭೆ ಕುಡಿಯುವ ನೀರಿನ ಕಾಮಗಾರಿಗೆ ₹65 ಕೋಟಿ, ಸಿದ್ದಾಪುರ ಮಳಲವಳ್ಳಿ ಕೈಗಾರಿಕಾ ವಸಾಹತು ಯೋಜನೆಗೆ ₹30 ಕೋಟಿ, ಸಿದ್ದಾಪುರ ಪಟ್ಟಣ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ₹58 ಕೋಟಿ, ಕಾನಸೂರು ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ₹26 ಕೋಟಿ, ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ₹22 ಕೋಟಿ ಸೇರಿ ಹಲವು ಕಾಮಗಾರಿಗಳಿಗಾಗಿ ₹382 ಕೋಟಿ ಅನುದಾನ ಮಂಜೂರು ಮಾಡಿ, ಕಾಮಗಾರಿಗಳಿಗೆ ಗುತ್ತಿಗೆ ಕರೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಹಂತ ಹಂತವಾಗಿ ಇನ್ನಷ್ಟು ರಸ್ತೆಗಳ ಮೇಲ್ದರ್ಜೆ ಕಾರ್ಯ ಮಾಡಲಾಗುವುದು. ಜನಪರವಾಗಿ ಆಡಳಿತ ನೀಡಿ, ಮೂಲಸೌಕರ್ಯ ಹೆಚ್ಚಿಸಲು ಕ್ರಮವಹಿಸಲಾಗುವುದು’ ಎಂದರು.</p>.<p>ಪಕ್ಷದ ಪದಾಧಿಕಾರಿಗಳಾದ ಜಗದೀಶ ಗೌಡ, ಎಸ್.ಕೆ. ಭಾಗವತ, ದೀಪಕ ದೊಡ್ಡೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>