ಅಕ್ರಮ ಎಂದು ಗುರುತಿಸಲಾಗಿರುವ ಎಲ್ಲರ ಪಡಿತರ ಚೀಟಿಗಳನ್ನೂ ರದ್ದು ಮಾಡಲಾಗಿದೆ. ಇನ್ನೂ ಹಲವು ಕುಟುಂಬಗಳು ಮಾಹಿತಿ ಮುಚ್ಚಿಟ್ಟಿರುವ ಬಗ್ಗೆ ಅನುಮಾನವಿದೆ. ಮನೆಯಲ್ಲಿ ಸಾಕಷ್ಟು ಅನುಕೂಲವಿದ್ದರೂ ಸರ್ಕಾರದ ಸೌಲಭ್ಯಗಳನ್ನು ತಮ್ಮದಾಗಿಸಿಕೊಳ್ಳಲು ಹುನ್ನಾರ ನಡೆಸಿದ ಹಲವರ ಅಕ್ರಮ ಈಗ ಬೆಳಕಿಗೆ ಬರುತ್ತಿದೆ. ಈ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕ್ರಮಕ್ಕೆ ಮುಂದಾಗಿದೆ.