<p><strong>ಕಾರವಾರ:</strong> ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ್ದ ಮಂಗಳವಾರದ ಮುಷ್ಕರಕ್ಕೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>‘ಐಎಂಎ ಮುಷ್ಕರ ಹೂಡುವುದಾಗಿ ಕೊನೆಯ ಅವಧಿಯಲ್ಲಿ ತಿಳಿಸಿತು. ಯಾವುದೇ ಮುನ್ಸೂಚನೆ ನೀಡದೆ ಮುಷ್ಕರ ಹೂಡಿದರೆ ಜಿಲ್ಲೆಯ ಜನತೆಗೆ ಸಮಸ್ಯೆ ಉಂಟಾಗಬಹುದು ಎಂದು ಎಂದಿನಂತೆ ಎಲ್ಲರೂ ಕಾರ್ಯನಿರ್ವಹಿಸಿದೆವು’ ಎಂದು ಐಎಂಎಯ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಸುರೇಶ್ ಭಟ್ ತಿಳಿಸಿದರು.</p>.<p>ಆದರೆ ಮಾಧ್ಯಮಗಳಲ್ಲಿ ಇತರ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ) ತೆರೆಯದಿರುವುದನ್ನು ನೋಡಿದ್ದ ಜನರು ಇಲ್ಲೂ ಕೂಡ ಮುಷ್ಕರ ಇರುವುದಾಗಿ ನಂಬಿದ್ದರು. ಹೀಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗಳ ಒಪಿಡಿಗೆ ಜನರು ಕಡಿಮೆ ಇದ್ದರು.</p>.<p>ಮನವಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ತಾಲ್ಲೂಕು ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ನೀಡಿದ್ದ ಮಂಗಳವಾರದ ಮುಷ್ಕರಕ್ಕೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>‘ಐಎಂಎ ಮುಷ್ಕರ ಹೂಡುವುದಾಗಿ ಕೊನೆಯ ಅವಧಿಯಲ್ಲಿ ತಿಳಿಸಿತು. ಯಾವುದೇ ಮುನ್ಸೂಚನೆ ನೀಡದೆ ಮುಷ್ಕರ ಹೂಡಿದರೆ ಜಿಲ್ಲೆಯ ಜನತೆಗೆ ಸಮಸ್ಯೆ ಉಂಟಾಗಬಹುದು ಎಂದು ಎಂದಿನಂತೆ ಎಲ್ಲರೂ ಕಾರ್ಯನಿರ್ವಹಿಸಿದೆವು’ ಎಂದು ಐಎಂಎಯ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಸುರೇಶ್ ಭಟ್ ತಿಳಿಸಿದರು.</p>.<p>ಆದರೆ ಮಾಧ್ಯಮಗಳಲ್ಲಿ ಇತರ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ) ತೆರೆಯದಿರುವುದನ್ನು ನೋಡಿದ್ದ ಜನರು ಇಲ್ಲೂ ಕೂಡ ಮುಷ್ಕರ ಇರುವುದಾಗಿ ನಂಬಿದ್ದರು. ಹೀಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗಳ ಒಪಿಡಿಗೆ ಜನರು ಕಡಿಮೆ ಇದ್ದರು.</p>.<p>ಮನವಿ: ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಸ್ಥಾಪನೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘದ ತಾಲ್ಲೂಕು ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>