ತಾಲ್ಲೂಕಿನ ಸುಗಾವಿ ಮೂಲದ ನಾರಾಯಣ ಅವರು ಸದ್ಯ ಶಿರಸಿಯಲ್ಲಿ ನೆಲೆಸಿದ್ದಾರೆ. 1973ರಲ್ಲೇ ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಬಳಿಕ ಕಾರವಾರ, ಗುಜರಾತ್ ಸೇರಿದಂತೆ ವಿವಿಧೆಡೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. 2013ರಲ್ಲಿ ನಿವೃತ್ತಿ ಪಡೆದು ಶಿರಸಿಗೆ ಮರಳಿದ್ದ ಅವರು ಪುನಃ ಡಿಪ್ಲೊಮಾ ಕಲಿಕೆಗೆ ಆಸಕ್ತಿ ತೋರಿದ್ದರು. ಅವರಿಗೆ ಪ್ರವೇಶಾತಿ ನೀಡಲು ತಾಂತ್ರಿಕ ಅಡಚಣೆ ಎದುರಾಗಿತ್ತು. ಅಂತಿಮವಾಗಿ 2019ರಲ್ಲಿ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಡಿಪ್ಲೊಮಾ ವಿಭಾಗಕ್ಕೆ ಪ್ರವೇಶ ದೊರೆತಿತ್ತು.