ಕಾರವಾರ: ಮೊಬೈಲ್ ಚಾರ್ಜರ್ನಿಂದ ಶಾಕ್ ತಗುಲಿ 8 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಸಿದ್ದರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಿದ್ದರದ ಹೆಸ್ಕಾಂ ಹೊರಗುತ್ತಿಗೆ ಉದ್ಯೋಗಿ ಸಂತೋಷ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿ ಅವರ 8 ತಿಂಗಳ ಮಗು ಸಾನಿಧ್ಯಾ ಸಾವನ್ನಪ್ಪಿದ್ದಾಗಿದೆ. ಪೋಷಕರು ಮೊಬೈಲ್ ಚಾರ್ಜ್ ಹಾಕಿ ಆಫ್ ಮಾಡದೇ ಹಾಗೆ ಇಟ್ಟಿದ್ದರು ಎನ್ನಲಾಗಿದೆ. ಆನ್ ಇದ್ದ ಮೊಬೈಲ್ ಚಾರ್ಜರ ಅನ್ನು ಮಗು ಬಾಯಲ್ಲಿಟ್ಟುಕೊಂಡಿದ್ದು ಇದರಿಂದಾಗಿ ಶಾಕ್ ತಗುಲಿ ಸಾವನ್ನಪ್ಪಿದ್ದಾಳೆ.
ಕಾರವಾರ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.