<p><strong>ಶಿರಸಿ</strong>: ಶಿಕ್ಷಣ ಸಂಸ್ಥೆಗಳು ಏಳಿಗೆ ಸಾಧಿಸಲು ಕ್ರಿಯಾಶೀಲ ಆಡಳಿತ ಮಂಡಳಿಯ ಕೊಡುಗೆ ಅಗತ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ತಾಲ್ಲೂಕಿನ ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ₹35 ಲಕ್ಷ ವೆಚ್ಚದಲ್ಲಿ ವಿವೇಕ ಯೋಜನೆ ಅಡಿ ನಿರ್ಮಾಣವಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾಲೇಜು ಉನ್ನತಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ. ಅಭಿವೃದ್ಧಿ ನಿರಂತರವಾಗಿದ್ದು, ಇನ್ನು ಮುಂದೆ ಕೂಡ ಸಹಕಾರ ನೀಡಲಾಗುವುದು. ಬನವಾಸಿಯಲ್ಲಿ ಉತ್ತಮ ದರ್ಜೆ ಬಾಲಕಿಯರ ವಸತಿ ನಿಲಯ ಸ್ಥಾಪಿಸಲು ಕ್ರಮವಹಿಸಲಾಗಿದೆ’ ಎಂದು ಹೇಳಿದರು. </p>.<div><blockquote>ನನ್ನ ಶಾಸಕತ್ವದ ಅವಧಿ 2028ರವರೆಗೆ ಇರಲಿದೆ. ಆವರೆಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗುತ್ತೇನೆ. ನಂತರ ಏನಾಗುತ್ತದೆ ಎದುರಿಸುತ್ತೇನೆ.</blockquote><span class="attribution">ಶಿವರಾಮ ಹೆಬ್ಬಾರ, ಶಾಸಕ</span></div>.<p>ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ದಲಿಂಗಪ್ಪ ಉಗ್ರಾಣದ ಮಾತನಾಡಿ, ‘ಕಾಲೇಜು ಸುತ್ತ ಕಾಂಪೌಂಡ್, ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಹೆಚ್ಚುವರಿ ಕಂಪ್ಯೂಟರ್, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಸಭಾಭವನ, ವಿದ್ಯಾರ್ಥಿಗಳಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ’ ಎಂದರು.</p>.<p><strong>ಬಾಗಿನ ಸಮರ್ಪಣೆ:</strong> ಉತ್ತಮ ಮಳೆಯ ಕಾರಣಕ್ಕೆ ಭರ್ತಿಯಾದ ಗುಡ್ನಾಪುರ ಕೆರೆ ಹಾಗೂ ವರದಾ ನದಿಗಳಿಗೆ ಶಾಸಕ ಶಿವರಾಮ ಹೆಬ್ಬಾರ ಅವರು ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳ ಸಮಕ್ಷಮ ಬಾಗಿನ ಸಮರ್ಪಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಯೇಶಾ ಬಿಬಿ, ಉಪಾಧ್ಯಕ್ಷ ಸಿದ್ಧವೀರಪ್ಪ ನರೇಗಲ್, ಸದಸ್ಯರಾದ ರಹಮತ್ ಬಿ., ಪ್ರಮುಖರಾದ ಬಸವರಾಜ, ಸಿ.ಎಫ್. ನಾಯ್ಕ, ಬಸವರಾಜ ದೊಡ್ಮನಿ, ದ್ಯಾಮಣ್ಣ ದೊಡ್ಮನಿ, ಶಂಕರ ಗೌಡ, ಪ್ರಾಚಾರ್ಯ ದಿನೇಶ ಕೆ., ಅಶೋಕ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಶಿಕ್ಷಣ ಸಂಸ್ಥೆಗಳು ಏಳಿಗೆ ಸಾಧಿಸಲು ಕ್ರಿಯಾಶೀಲ ಆಡಳಿತ ಮಂಡಳಿಯ ಕೊಡುಗೆ ಅಗತ್ಯ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ತಾಲ್ಲೂಕಿನ ಬನವಾಸಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ₹35 ಲಕ್ಷ ವೆಚ್ಚದಲ್ಲಿ ವಿವೇಕ ಯೋಜನೆ ಅಡಿ ನಿರ್ಮಾಣವಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಾಲೇಜು ಉನ್ನತಿಗೆ ಸಾಕಷ್ಟು ಕೊಡುಗೆ ನೀಡಲಾಗಿದೆ. ಅಭಿವೃದ್ಧಿ ನಿರಂತರವಾಗಿದ್ದು, ಇನ್ನು ಮುಂದೆ ಕೂಡ ಸಹಕಾರ ನೀಡಲಾಗುವುದು. ಬನವಾಸಿಯಲ್ಲಿ ಉತ್ತಮ ದರ್ಜೆ ಬಾಲಕಿಯರ ವಸತಿ ನಿಲಯ ಸ್ಥಾಪಿಸಲು ಕ್ರಮವಹಿಸಲಾಗಿದೆ’ ಎಂದು ಹೇಳಿದರು. </p>.<div><blockquote>ನನ್ನ ಶಾಸಕತ್ವದ ಅವಧಿ 2028ರವರೆಗೆ ಇರಲಿದೆ. ಆವರೆಗೂ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗುತ್ತೇನೆ. ನಂತರ ಏನಾಗುತ್ತದೆ ಎದುರಿಸುತ್ತೇನೆ.</blockquote><span class="attribution">ಶಿವರಾಮ ಹೆಬ್ಬಾರ, ಶಾಸಕ</span></div>.<p>ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ದಲಿಂಗಪ್ಪ ಉಗ್ರಾಣದ ಮಾತನಾಡಿ, ‘ಕಾಲೇಜು ಸುತ್ತ ಕಾಂಪೌಂಡ್, ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಹೆಚ್ಚುವರಿ ಕಂಪ್ಯೂಟರ್, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಸಭಾಭವನ, ವಿದ್ಯಾರ್ಥಿಗಳಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ’ ಎಂದರು.</p>.<p><strong>ಬಾಗಿನ ಸಮರ್ಪಣೆ:</strong> ಉತ್ತಮ ಮಳೆಯ ಕಾರಣಕ್ಕೆ ಭರ್ತಿಯಾದ ಗುಡ್ನಾಪುರ ಕೆರೆ ಹಾಗೂ ವರದಾ ನದಿಗಳಿಗೆ ಶಾಸಕ ಶಿವರಾಮ ಹೆಬ್ಬಾರ ಅವರು ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳ ಸಮಕ್ಷಮ ಬಾಗಿನ ಸಮರ್ಪಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಯೇಶಾ ಬಿಬಿ, ಉಪಾಧ್ಯಕ್ಷ ಸಿದ್ಧವೀರಪ್ಪ ನರೇಗಲ್, ಸದಸ್ಯರಾದ ರಹಮತ್ ಬಿ., ಪ್ರಮುಖರಾದ ಬಸವರಾಜ, ಸಿ.ಎಫ್. ನಾಯ್ಕ, ಬಸವರಾಜ ದೊಡ್ಮನಿ, ದ್ಯಾಮಣ್ಣ ದೊಡ್ಮನಿ, ಶಂಕರ ಗೌಡ, ಪ್ರಾಚಾರ್ಯ ದಿನೇಶ ಕೆ., ಅಶೋಕ ಶೆಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>