ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಮೂಲ ಸೌಲಭ್ಯ ಪರಿಶೀಲಿಸಿ, ನಂತರ ಮಾತನಾಡಿದ ಅವರು, ಶೌಚಾಲಯದ ಅವ್ಯವಸ್ಥೆ ಕುರಿತು ವ್ಯಾಪಕ ದೂರುಗಳು ಕೇಳಿಬಂದಿದ್ದವು. ಸಮರ್ಪಕವಾಗಿ ಊಟ, ಉಪಾಹಾರ ನೀಡದ ಬಗ್ಗೆಯೂ ಗಂಭೀರ ಆರೋಪಗಳು ಕೇಳಿಬಂದಿದ್ದರಿಂದ ಶಾಸಕ ಶಿವರಾಮ ಹೆಬ್ಬಾರ ನೇತೃತ್ವದಲ್ಲಿ ಭೇಟಿ ನೀಡಿ ಸಮಸ್ಯೆ ಆಲಿಸಲಾಗಿದೆ. ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ಹೆಬ್ಬಾರ, ಈ ರೀತಿ ಪುನರಾವರ್ತನೆ ಆದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪ್ರಾಚಾರ್ಯ ಸಹಿತ ವಾರ್ಡನ್ಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದರು.